Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:4 - ಕನ್ನಡ ಸಮಕಾಲಿಕ ಅನುವಾದ

4 “ಪರಾಕ್ರಮಶಾಲಿಗಳ ಬಿಲ್ಲುಗಳು ಮುರಿದು ಬಿದ್ದಿವೆ, ಎಡವಿದವರು ಬಲದಿಂದ ನಡುಕಟ್ಟಿ ನಿಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಶೂರರ ಬಿಲ್ಲುಗಳು ಮುರಿಯಲ್ಪಟ್ಟಿವೆ, ಎಡವಿದವರು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಮುರಿದು ಬಿದ್ದಿವೆ ಶೂರರ ಬಿಲ್ಲುಬಾಣಗಳು ದುರ್ಬಲರಾದರೋ ಶೌರ್ಯದ ನಡುಕಟ್ಟಿ ನಿಂತಿಹರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಶೂರರ ಬಿಲ್ಲುಗಳು ಮುರಿಯಲ್ಪಡುತ್ತವೆ, ಎಡವಿದವರು ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಶಕ್ತಿಶಾಲಿ ಯೋಧರ ಬಿಲ್ಲುಗಳು ಮುರಿದುಹೋಗುತ್ತವೆ. ಬಲಹೀನರು ಶಕ್ತಿವಂತರಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:4
16 ತಿಳಿವುಗಳ ಹೋಲಿಕೆ  

ದೇವರು ಅಲ್ಲಿಯೇ ಬಿಲ್ಲಿನ ಉರಿಬಾಣಗಳನ್ನೂ ಗುರಾಣಿಯನ್ನೂ ಖಡ್ಗವನ್ನೂ ಯುದ್ಧಾಯುಧಗಳನ್ನು ಮುರಿದುಬಿಟ್ಟರು.


ಆದರೆ ಅವರ ಖಡ್ಗ ಅವರ ಹೃದಯದಲ್ಲಿ ಇರಿದು ಬಿಡುವುದು; ಅವರ ಬಿಲ್ಲುಗಳು ಮುರಿದುಹೋಗುವವು.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.


ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು,


ಅದಕ್ಕೆ ಕರ್ತ ಯೇಸು, “ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು,” ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.


ಏಕೆಂದರೆ ದುಷ್ಟರ ತೋಳುಗಳು ಮುರಿದುಹೋಗುವವು, ಆದರೆ ನೀತಿವಂತರನ್ನು ಯೆಹೋವ ದೇವರು ಉದ್ಧಾರ ಮಾಡುವರು.


ನಿಮ್ಮ ಸಂಗಡ ಯುದ್ಧಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿದ್ದಾಗ್ಯೂ, ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು, ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.”


ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ, ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ.


ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.


ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ, ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.


“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಆತನು ದಣಿದವನಿಗೆ ಶಕ್ತಿಯನ್ನೂ, ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.


ಏಕೆಂದರೆ ವಿನಾಶ ಮಾಡುವವನು ಅದರ ಮೇಲೆ ಅಂದರೆ ಬಾಬಿಲೋನಿನ ಮೇಲೆಯೇ ಬಂದಿದ್ದಾನೆ. ಅದರ ಪರಾಕ್ರಮಶಾಲಿಗಳು ಸೆರೆಯಾಗಿಬಿಟ್ಟಿದ್ದಾರೆ. ಅವಳ ಬಿಲ್ಲುಗಳು ಮುರಿದುಹೋಗಿವೆ. ಏಕೆಂದರೆ ಪ್ರತಿದಂಡನೆಗಳ ದೇವರಾದ ಯೆಹೋವ ದೇವರು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು