Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರು ಬಡತನವನ್ನು, ಐಶ್ವರ್ಯವನ್ನು ಕೊಡುವವರೂ, ತಗ್ಗಿಸುವವರೂ, ಉನ್ನತ ಮಾಡುವವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಡತನ, ಸಿರಿತನಗಳನ್ನು ಕೊಡುವವನೂ ಯೆಹೋವನೇ, ತಗ್ಗಿಸುವವನೂ, ಹೆಚ್ಚಿಸುವವನೂ ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬಡತನ, ಸಿರಿತನ ಕೊಡುವವನು ಆ ಸರ್ವೇಶ್ವರನೇ ತಗ್ಗಿಸುವವನು, ಹೆಚ್ಚಿಸುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಡತನ ಸಿರಿತನಗಳನ್ನು ಕೊಡುವವನೂ ತಗ್ಗಿಸುವವನೂ ಹೆಚ್ಚಿಸುವವನೂ ಯೆಹೋವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಜನರನ್ನು ಬಡವರನ್ನಾಗಿಸುತ್ತಾನೆ. ಆತನು ಜನರನ್ನು ಹಣವಂತರನ್ನಾಗಿಸುತ್ತಾನೆ. ಯೆಹೋವನು ಜನರನ್ನು ದೀನರನ್ನಾಗಿಸುತ್ತಾನೆ. ಆತನು ಜನರನ್ನು ದೊಡ್ಡವರನ್ನಾಗಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:7
17 ತಿಳಿವುಗಳ ಹೋಲಿಕೆ  

ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.


ದೇವರು ತಗ್ಗಿದವರನ್ನು ಉನ್ನತದಲ್ಲಿಡುತ್ತಾರೆ; ದುಃಖವುಳ್ಳವರನ್ನು ಭದ್ರತೆಗೆ ಒಯ್ಯುತ್ತಾರೆ.


ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”


ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು.


ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.


ಇದಕ್ಕೆ ಕಾರಣ ನೀವು ಗಮನ ಕೊಡದಿರುವುದೇ. ನೀವು ನನಗೆ ಲಕ್ಷ್ಯಕೊಡುತ್ತಾಯಿಲ್ಲ.


ಯೇಹುವು ಎದ್ದು ಮನೆಯೊಳಕ್ಕೆ ಹೋದನು. ಆಗ ಪ್ರವಾದಿಯು ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಯೆಹೋವ ದೇವರ ಜನರಾದ ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ.


ಹೌದು, ಗರ್ವಿಷ್ಠರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರು ನಿಂತಿರುವ ಸ್ಥಳದಲ್ಲಿಯೇ ಕೆಡವಿಬಿಡು.


ಐಶ್ವರ್ಯವೂ, ಘನವೂ ನಿಮ್ಮ ಬಳಿಯಿಂದ ಬರುತ್ತವೆ. ನೀವು ಸಮಸ್ತವನ್ನು ಆಳಿಕೆಮಾಡುವವರು. ಶಕ್ತಿಯೂ, ಪರಾಕ್ರಮವೂ ನಿಮ್ಮ ಕೈಯಲ್ಲಿ ಇವೆ. ಎಲ್ಲರಿಗೂ ಉನ್ನತಿಯನ್ನೂ, ಬಲವನ್ನೂ ಕೊಡುವುದು ನಿಮ್ಮ ಕೈಯಲ್ಲಿ ಇದೆ.


ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು.


ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು.


ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.


ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.


“ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು.


ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “ ‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು