Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:29 - ಕನ್ನಡ ಸಮಕಾಲಿಕ ಅನುವಾದ

29 ಅವನು ನನಗೆ, ‘ದಯಮಾಡಿ ನನಗೆ ಅಪ್ಪಣೆಕೊಡು. ಏಕೆಂದರೆ ಊರೊಳಗೆ ನಮ್ಮ ಕುಟುಂಬಕ್ಕೆ ಯಜ್ಞ ಮಾಡುವುದಿದೆ. ನನ್ನ ಸಹೋದರರು ನನ್ನನ್ನು ಬರಲು ಹೇಳಿ ಕಳುಹಿಸಿದರು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನಾನು ಅಪ್ಪಣೆ ತೆಗೆದುಕೊಂಡು ನನ್ನ ಸಹೋದರರನ್ನು ಕಾಣುವುದಕ್ಕೆ ಹೋಗುತ್ತೇನೆ,’ ಎಂದನು. ಆದ್ದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ’ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ತನ್ನ ಅಣ್ಣ ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ತಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರಲು ಅಪ್ಪಣೆಯಾಗಬೇಕು, ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಆದುದರಿಂದ ಅವನು ಅರಸರ ಪಂಕ್ತಿಗೆ ಬರಲಿಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ದಯವಿಟ್ಟು ನನಗೆ ಅಪ್ಪಣೆಕೊಡು. ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರುತ್ತೇನೆ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ‘ನಮ್ಮ ಗೋತ್ರದವರು ಬೆತ್ಲೆಹೇಮಿನಲ್ಲಿ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ನನ್ನ ಸಹೋದರರು ನನಗೂ ಬರಬೇಕೆಂದು ಕೇಳಿಕೊಂಡಿದ್ದಾರೆ. ನೀನು ನನ್ನ ಗೆಳೆಯನಾಗಿರುವುದಾದರೆ ನನ್ನ ಸೋದರರನ್ನು ನೋಡಿಕೊಂಡು ಬರಲು ದಯವಿಟ್ಟು ನನಗೆ ಅವಕಾಶಕೊಡು ಎಂದು ಹೇಳಿದನು.’ ಆದ್ದರಿಂದಲೇ ದಾವೀದನು ರಾಜನ ಊಟದ ಮೇಜಿಗೆ ಬಂದಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:29
4 ತಿಳಿವುಗಳ ಹೋಲಿಕೆ  

ದಾವೀದನು ಆ ಮನುಷ್ಯರ ಸಂಗಡ ಮಾತನಾಡುತ್ತಿರುವುದನ್ನು ಅವನ ಹಿರಿಯ ಸಹೋದರನಾದ ಎಲೀಯಾಬನು ಕೇಳಿ, ಅವನ ಮೇಲೆ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ, ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು. ಏಕೆಂದರೆ ಯುದ್ಧವನ್ನು ನೋಡಲು ಇಳಿದು ಬಂದಿದ್ದೀ,” ಎಂದನು.


ಆಗ ಸಮುಯೇಲನು, “ನಾನು ಹೋಗುವುದು ಹೇಗೆ? ಸೌಲನು ಅದನ್ನು ಕೇಳಿದರೆ, ನನ್ನನ್ನು ಕೊಂದುಹಾಕುವನು,” ಎಂದನು. ಅದಕ್ಕೆ ಯೆಹೋವ ದೇವರು, “ನೀನು ಒಂದು ಕಡಸನ್ನು ನಿನ್ನ ಸಂಗಡ ತೆಗೆದುಕೊಂಡುಹೋಗಿ, ‘ನಾನು ಯೆಹೋವ ದೇವರಿಗಾಗಿ ಯಜ್ಞಮಾಡುವುದಕ್ಕೆ ಬಂದೆನು,’ ಎಂದು ಹೇಳಿ,


ಯೋನಾತಾನನು ಸೌಲನಿಗೆ ಉತ್ತರವಾಗಿ, “ಬೇತ್ಲೆಹೇಮಿನವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿಕೊಂಡನು.


ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ, “ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ, ಇಷಯನ ಮಗನನ್ನು ನೀನು ಆರಿಸಿಕೊಂಡಿದ್ದೀ ಎಂದು ನಾನರಿಯೆನೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಅಸಹ್ಯವಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು