Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:30 - ಕನ್ನಡ ಸಮಕಾಲಿಕ ಅನುವಾದ

30 ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ, “ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ, ಇಷಯನ ಮಗನನ್ನು ನೀನು ಆರಿಸಿಕೊಂಡಿದ್ದೀ ಎಂದು ನಾನರಿಯೆನೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಅಸಹ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಸೌಲನು ಬಹಳವಾಗಿ ಕೋಪಗೊಂಡು ಯೋನಾತಾನನಿಗೆ, “ಎಲೈ ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವುದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ, ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆಗ ಸೌಲನು ಸಿಡಿದೆದ್ದು ಯೋನಾತಾನನಿಗೆ, “ಎಲೋ, ದುಷ್ಟದಾಸಿಯ ಮಗನೇ, ನೀನು ಜೆಸ್ಸೆಯನ ಮಗನೊಡನೆ ಸ್ನೇಹದಿಂದ ಇರುವುದು ನನಗೆ ಗೊತ್ತಿಲ್ಲವೇ? ಈ ಸ್ನೇಹದಿಂದ ನಿನಗೂ ಹೆತ್ತವಳಿಗೂ ಮಾನಭಂಗ ತರುತ್ತಾ ಇರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಸೌಲನು ಬಹಳವಾಗಿ ಉರಿಗೊಂಡು ಯೋನಾತಾನನಿಗೆ - ಎಲೋ, ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಸೌಲನು ಯೋನಾತಾನನ ಮೇಲೆ ಬಹಳ ಕೋಪಗೊಂಡು, “ನೀನು ಅವಿಧೇಯಳಾದ ದಾಸಿಯ ಮಗ. ನೀನೂ ಅವಳಂತೆಯೇ ಅವಿಧೇಯ. ನೀನು ದಾವೀದನ ಪಕ್ಷವಹಿಸಿರುವುದು ನನಗೆ ಗೊತ್ತಿದೆ. ನೀನು ನಿನಗೂ ಮತ್ತು ನಿನ್ನ ತಾಯಿಗೂ ನಾಚಿಕೆಯನ್ನು ತಂದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:30
14 ತಿಳಿವುಗಳ ಹೋಲಿಕೆ  

ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ.


ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.


ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ಕಲ್ಲು ಭಾರ, ಮರಳು ಭಾರ; ಆದರೆ ಇವೆರಡಕ್ಕಿಂತ ಮೂಢನ ಕೋಪವು ಬಹು ಭಾರ.


ತನ್ನ ಸ್ವಂತ ಆತ್ಮವನ್ನು ಆಳದಿರುವವನು, ಗೋಡೆ ಬಿದ್ದ ಹಾಳೂರಿಗೆ ಸಮಾನ.


ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು.


ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.


ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.


ತಾಳ್ಮೆಯುಳ್ಳವನು ಬಹು ವಿವೇಕಿ, ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು.


ಮೂಢನನ್ನು ಅಸಮಾಧಾನವು ಕೊಲ್ಲುವುದು; ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು.


ಅವನು ನನಗೆ, ‘ದಯಮಾಡಿ ನನಗೆ ಅಪ್ಪಣೆಕೊಡು. ಏಕೆಂದರೆ ಊರೊಳಗೆ ನಮ್ಮ ಕುಟುಂಬಕ್ಕೆ ಯಜ್ಞ ಮಾಡುವುದಿದೆ. ನನ್ನ ಸಹೋದರರು ನನ್ನನ್ನು ಬರಲು ಹೇಳಿ ಕಳುಹಿಸಿದರು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನಾನು ಅಪ್ಪಣೆ ತೆಗೆದುಕೊಂಡು ನನ್ನ ಸಹೋದರರನ್ನು ಕಾಣುವುದಕ್ಕೆ ಹೋಗುತ್ತೇನೆ,’ ಎಂದನು. ಆದ್ದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ,” ಎಂದನು.


ಏಕೆಂದರೆ ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳವರೆಗೂ ನೀನಾದರೂ, ನಿನ್ನ ರಾಜ್ಯವಾದರೂ ಸ್ಥಿರವಾಗುವುದಿಲ್ಲ. ಆದ್ದರಿಂದ ಈಗ ನೀನು ಅವನನ್ನು ಕರೆಕಳುಹಿಸಿ, ನನ್ನ ಬಳಿಗೆ ತೆಗೆದುಕೊಂಡು ಬಾ. ಏಕೆಂದರೆ ಅವನು ನಿಜವಾಗಿ ಸಾಯಲೇಬೇಕು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು