Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:42 - ಕನ್ನಡ ಸಮಕಾಲಿಕ ಅನುವಾದ

42 ಆಗ ಯೋನಾತಾನನು ದಾವೀದನಿಗೆ, “ನೀನು ಸಮಾಧಾನವಾಗಿ ಹೋಗು, ಯೆಹೋವ ದೇವರು ಎಂದೆಂದಿಗೂ ನನಗೂ, ನಿನಗೂ, ನನ್ನ ಸಂತಾನಕ್ಕೂ, ನಿನ್ನ ಸಂತಾನಕ್ಕೂ ಸಾಕ್ಷಿಯಾಗಿರಲೆಂದು ಮಧ್ಯದಲ್ಲಿ ಯೆಹೋವ ದೇವರ ಹೆಸರಿನಿಂದ ಆಣೆಯಿಟ್ಟು ನಾವಿಬ್ಬರೂ ಪ್ರಮಾಣ ಮಾಡಿಕೊಂಡೆವಲ್ಲಾ,” ಎಂದನು. ಆಗ ದಾವೀದನು ಎದ್ದು ಹೋದನು. ಯೋನಾತಾನನು ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು; ನಾವು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟು ಒಪ್ಪಂದಮಾಡಿಕೊಂಡಿದ್ದೇವಲ್ಲವೆ? ಅವರೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ,” ಎಂದು ಹೇಳಿದನು. ಬಳಿಕ ದಾವೀದನು ಹೊರಟುಹೋದನು. ಇತ್ತ ಯೋನಾತಾನನು ಊರಿಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಅನಂತರ ಯೋನಾತಾನನು ದಾವೀದನಿಗೆ - ಸಮಾಧಾನದಿಂದ ಹೋಗು; ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ; ಆತನೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು; ಯೋನಾತಾನನು ಊರೊಳಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವಿಬ್ಬರೂ ಗೆಳೆಯರಾಗಿರಲು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದೇವೆ. ನಮ್ಮಿಬ್ಬರಿಗೂ ನಮ್ಮ ಸಂತತಿಯವರಿಗೂ ಇರುವ ಸಂಬಂಧಕ್ಕೆ ಯೆಹೋವನೇ ಸಾಕ್ಷಿ ಎಂದು ಹೇಳಿದ್ದೇವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:42
10 ತಿಳಿವುಗಳ ಹೋಲಿಕೆ  

ಆಗ ಏಲಿಯು ಅವಳಿಗೆ, “ಸಮಾಧಾನದಿಂದ ಹೋಗು. ಇಸ್ರಾಯೇಲಿನ ದೇವರು, ಅವರಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯಂತೆ ನಿನಗೆ ಕೊಡಲಿ,” ಎಂದನು.


ಅವರಿಬ್ಬರೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಹೋರೆಷದಲ್ಲಿಯೇ ಉಳಿದನು. ಆದರೆ ಯೋನಾತಾನನು ತನ್ನ ಮನೆಗೆ ಹೋದನು.


ಸೆರೆಮನೆಯ ಅಧಿಕಾರಿ ಪೌಲನಿಗೆ, “ನಿನ್ನನ್ನು ಸೀಲನನ್ನು ಬಿಟ್ಟುಬಿಡಲು ನ್ಯಾಯಾಧಿಪತಿಗಳು ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಬಹುದು,” ಎಂದು ಪ್ರಕಟಿಸಿದನು.


ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು,” ಎಂದರು.


ಯೆಹೋವ ದೇವರು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ, ಎಂದಿಗೂ ನಿನ್ನ ದಯೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು,” ಎಂದನು.


ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ, ನಿಮಗೆ ಸಮಾಧಾನ ಅನುಗ್ರಹಿಸಲಿ.” ’


ಹೀಗೆಯೇ ಯೋನಾತಾನನು ದಾವೀದನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು, “ಅಗಲಿದರೆ ಯೆಹೋವ ದೇವರೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ,” ಎಂದನು.


ಅವಳು ತನಗೆ ತಂದದ್ದನ್ನು ದಾವೀದನು ತೆಗೆದುಕೊಂಡು ಅವಳಿಗೆ, “ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ನಾನು ನಿನ್ನ ಮಾತನ್ನು ಕೇಳಿ ನಿನ್ನ ಮುಖ ದಾಕ್ಷಿಣ್ಯವನ್ನು ನೋಡಿದೆನು,” ಎಂದನು.


ದಾವೀದನು, “ಸೌಲನ ಕುಟುಂಬದಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆ ತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು