Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:7 - ಕನ್ನಡ ಸಮಕಾಲಿಕ ಅನುವಾದ

7 ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಯೆಹೋವ ದೇವರ ಆಲಯದ ಮುಂದೆ ಉಳಿದುಕೊಂಡಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದೇ ದಿನ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ಉಳಿದುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದೇ ದಿವಸ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ತಡೆಯಲ್ಪಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೌಲನ ಅಧಿಕಾರಿಗಳಲ್ಲಿ ಒಬ್ಬನು ಆ ದಿನ ಅಲ್ಲಿದ್ದನು. ಅವನು ದೋಯೇಗನೆಂಬ ಎದೋಮ್ಯನು. ದೋಯೇಗನನ್ನು ಯೆಹೋವನ ಸನ್ನಿಧಿಯಲ್ಲಿ ಇಟ್ಟಿದ್ದರು. ಸೌಲನ ಕುರಿಗಳನ್ನು ಕಾಯುವವರಿಗೆ ದೋಯೇಗನು ನಾಯಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:7
21 ತಿಳಿವುಗಳ ಹೋಲಿಕೆ  

ಆಗ ಸೌಲನು ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಉತ್ತರವಾಗಿ, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ಕಂಡೆನು.


ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಜವಾಬ್ದಾರಿಯಾಗಿದ್ದನು. ತಗ್ಗುಗಳಲ್ಲಿರುವ ದನಗಳ ಮೇಲೆ ಅಡ್ಲಾಯಿಯ ಮಗನಾದ ಶಾಫಾಟನು ಜವಾಬ್ದಾರಿಯಾಗಿದ್ದನು.


“ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.


ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.


ಹೀಗೆ ಸೌಲನು ಇಸ್ರಾಯೇಲಿನ ದೊರೆತನವನ್ನು ತೆಗೆದುಕೊಂಡು, ಸುತ್ತಲಿರುವ ತನ್ನ ಸಮಸ್ತ ಶತ್ರುಗಳಾದ ಮೋವಾಬ್ಯರ ಮೇಲೆಯೂ, ಅಮ್ಮೋನ್ಯರ ಮೇಲೆಯೂ, ಎದೋಮ್ಯರ ಮೇಲೆಯೂ, ಚೋಬದ ಅರಸರ ಮೇಲೆಯೂ, ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ, ಅವರನ್ನು ಪೀಡಿಸಿದನು.


ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು, “ಜನರು ಅಳುವುದೇಕೆ?” ಎಂದು ಕೇಳಿದನು. ಅವರು ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.


ಗೆರಾರಿನ ಮಂದೆಯನ್ನು ಮೇಯಿಸುವವರು, “ಈ ನೀರು ನಮ್ಮದು,” ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ, ಏಸೆಕ್, ಎಂದು ಹೆಸರಿಟ್ಟನು.


ಆಗ ದಾವೀದನು ಅಹೀಮೆಲೆಕನಿಗೆ, “ಇಲ್ಲಿ ನಿನ್ನ ಕೈ ವಶದಲ್ಲಿ ಈಟಿಯಾದರೂ, ಖಡ್ಗವಾದರೂ ಇಲ್ಲವೋ? ಏಕೆಂದರೆ ಅರಸನ ಕಾರ್ಯವು ಅವಸರವಾದುದರಿಂದ ನಾನು ನನ್ನ ಖಡ್ಗವನ್ನಾದರೂ, ಆಯುಧಗಳನ್ನಾದರೂ ತೆಗೆದುಕೊಂಡು ಬರಲಿಲ್ಲ,” ಎಂದನು.


ಆಗ ದಾವೀದನು ಅಬಿಯಾತರನಿಗೆ, “ಎದೋಮ್ಯನಾದ ದೋಯೇಗನು ಅಲ್ಲಿ ಇದ್ದುದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ದಿನವೇ ನೆನೆಸಿಕೊಂಡೆ. ನಿನ್ನ ತಂದೆಯ ಮನೆಯ ಸಮಸ್ತರ ಪ್ರಾಣಹತ್ಯೆಗೆ ಕಾರಣನಾದವನು ನಾನೇ.


ಕುರಿ ಮಂದೆಗಳ ಮೇಲೆ ಜವಾಬ್ದಾರಿಯಾಗಿದ್ದವನು ಹಗ್ರೀಯನಾದ ಯಾಜೀಜ್. ಇವರೆಲ್ಲರು ಅರಸನಾದ ದಾವೀದನ ಸ್ವತ್ತಿನ ಮೇಲೆ ಪ್ರಧಾನರಾಗಿದ್ದರು.


“ ‘ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಅತಿಥಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.


ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು.


“ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು.


ಪ್ರತಿಯೊಂದು ಸಬ್ಬತ್ ದಿನದಲ್ಲಿಯೂ ಯೆಹೋವ ದೇವರ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮಪಡಿಸಬೇಕು. ಇದು ಇಸ್ರಾಯೇಲರ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.


ಇವನು ಅವನಿಗೋಸ್ಕರ ಯೆಹೋವ ದೇವರನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು, ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಅವನಿಗೆ ಕೊಟ್ಟನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು