Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:8 - ಕನ್ನಡ ಸಮಕಾಲಿಕ ಅನುವಾದ

8 ಆಗ ದಾವೀದನು ಅಹೀಮೆಲೆಕನಿಗೆ, “ಇಲ್ಲಿ ನಿನ್ನ ಕೈ ವಶದಲ್ಲಿ ಈಟಿಯಾದರೂ, ಖಡ್ಗವಾದರೂ ಇಲ್ಲವೋ? ಏಕೆಂದರೆ ಅರಸನ ಕಾರ್ಯವು ಅವಸರವಾದುದರಿಂದ ನಾನು ನನ್ನ ಖಡ್ಗವನ್ನಾದರೂ, ಆಯುಧಗಳನ್ನಾದರೂ ತೆಗೆದುಕೊಂಡು ಬರಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯವು ತುರ್ತಾದ್ದರಿಂದ ಕತ್ತಿಯನ್ನಾಗಲಿ, ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲಿಲ್ಲ, ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯ ತುರ್ತಾದದ್ದು. ಆದ್ದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ. ನಿನ್ನ ಬಳಿಯಲ್ಲಿ ಭರ್ಜಿಯಾಗಲಿ, ಕತ್ತಿಯಾಗಲಿ ಇಲ್ಲವೇ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದಾವೀದನು ಅಹೀಮೆಲೆಕನನ್ನು - ಅರಸನ ಕಾರ್ಯವು ಅವಸರವಾಗಿದ್ದದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ; ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ ಎಂದು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾವೀದನು ಅಹೀಮೆಲೆಕನಿಗೆ, “ನಿನ್ನ ಹತ್ತಿರ ಖಡ್ಗವಾಗಲಿ ಭರ್ಜಿಯಾಗಲಿ ಇದೆಯೇ? ರಾಜನ ಕಾರ್ಯಭಾರವು ಬಹುಮುಖ್ಯವಾದುದು. ನಾನು ಬೇಗ ಹೋಗಬೇಕಾಗಿದೆ. ನಾನು ಕತ್ತಿಯನ್ನಾಗಲೀ ಇತರ ಆಯುಧವನ್ನಾಗಲೀ ತರಲಿಲ್ಲ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:8
6 ತಿಳಿವುಗಳ ಹೋಲಿಕೆ  

ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಯೆಹೋವ ದೇವರ ಆಲಯದ ಮುಂದೆ ಉಳಿದುಕೊಂಡಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.


ಅದಕ್ಕೆ ಯಾಜಕನು, “ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಏಫೋದಿನ ಹಿಂದೆ ಒಂದು ಬಟ್ಟೆಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೋ. ಏಕೆಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ,” ಎಂದನು. ಅದಕ್ಕೆ ದಾವೀದನು, “ಅದರಂಥದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದನು.


ಆಗ ಸೌಲನು ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಉತ್ತರವಾಗಿ, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ಕಂಡೆನು.


ಆಗ ದಾವೀದನು ಅಬಿಯಾತರನಿಗೆ, “ಎದೋಮ್ಯನಾದ ದೋಯೇಗನು ಅಲ್ಲಿ ಇದ್ದುದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ದಿನವೇ ನೆನೆಸಿಕೊಂಡೆ. ನಿನ್ನ ತಂದೆಯ ಮನೆಯ ಸಮಸ್ತರ ಪ್ರಾಣಹತ್ಯೆಗೆ ಕಾರಣನಾದವನು ನಾನೇ.


ಅಂಚೆಯವರು ಅರಸನ ಆಜ್ಞೆಯಿಂದ ಪ್ರೇರಿತರಾಗಿ ಅರಮನೆಯ ಕುದುರೆಗಳ ಮೇಲೆ ಅತಿ ಶೀಘ್ರವಾಗಿ ಹೊರಟರು. ಈ ಆಜ್ಞೆಯು ಶೂಷನ್ ನಗರದ ಅರಮನೆಯಲ್ಲಿ ಕೊಡಲಾಗಿತ್ತು.


ಹಣದ ಚೀಲವನ್ನಾಗಲಿ, ಪ್ರಯಾಣದ ಚೀಲವನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರನ್ನೂ ಕುಶಲ ವಿಚಾರ ಮಾಡಿಕೊಂಡಿರಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು