Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:16 - ಕನ್ನಡ ಸಮಕಾಲಿಕ ಅನುವಾದ

16 ಅದಕ್ಕೆ ಅರಸನು, “ಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯ ಸಮಸ್ತರೂ ನಿಶ್ಚಯವಾಗಿ ಸಾಯಲೇಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆಗ ಅರಸನು ಅವನಿಗೆ, “ಅಹೀಮೆಲೆಕನೇ ನೀನೂ ನಿನ್ನ ಮನೆಯವರೂ ಸಾಯಲೇ ಬೇಕು” ಎಂದು ಹೇಳಿ ತನ್ನ ಬಳಿಯಲ್ಲಿದ್ದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಅರಸನು ಅವನಿಗೆ, “ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆಗ ಅರಸನು ಅವನಿಗೆ - ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು ಎಂದು ಹೇಳಿ ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ರಾಜನು, “ಅಹೀಮೆಲೆಕನೇ, ನೀನು ಮತ್ತು ನಿನ್ನ ಬಂಧುಗಳೆಲ್ಲರೂ ಸಾಯಲೇಬೇಕು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:16
14 ತಿಳಿವುಗಳ ಹೋಲಿಕೆ  

ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.


ಹೆರೋದನು ಅವನನ್ನು ಹುಡುಕಿ ಕಾಣದೆ ಹೋದದ್ದರಿಂದ ಕಾವಲುಗಾರರನ್ನು ವಿಚಾರಿಸಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಅನಂತರ ಹೆರೋದನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಸ್ವಲ್ಪ ಸಮಯ ಇದ್ದನು.


ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.


ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು.


ಅರಸನು ಪಂಡಿತರಿಗೆ ಉತ್ತರವಾಗಿ, “ನನ್ನ ಈ ಮಾತು ಖಂಡಿತ. ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ, ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು. ನಿಮ್ಮ ಮನೆಗಳನ್ನು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.


ಮೊರ್ದೆಕೈ ಮತ್ತು ಅವನ ಜನರು ಯೆಹೂದ್ಯರೆಂದು ಹಾಮಾನನಿಗೆ ಗೊತ್ತಾದಾಗ ಮೊರ್ದೆಕೈಯನ್ನು ಮಾತ್ರ ಕೊಲ್ಲಬಾರದೆಂದು ಅವನಿಗೆ ತೋರಿತು. ಅದರ ಬದಲು ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನರಾದ ಯೆಹೂದ್ಯರನ್ನೆಲ್ಲಾ ಸಂಹರಿಸಲು ಮಾರ್ಗವನ್ನು ಹುಡುಕಿದನು.


ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು.


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ಏಕೆಂದರೆ ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳವರೆಗೂ ನೀನಾದರೂ, ನಿನ್ನ ರಾಜ್ಯವಾದರೂ ಸ್ಥಿರವಾಗುವುದಿಲ್ಲ. ಆದ್ದರಿಂದ ಈಗ ನೀನು ಅವನನ್ನು ಕರೆಕಳುಹಿಸಿ, ನನ್ನ ಬಳಿಗೆ ತೆಗೆದುಕೊಂಡು ಬಾ. ಏಕೆಂದರೆ ಅವನು ನಿಜವಾಗಿ ಸಾಯಲೇಬೇಕು,” ಎಂದನು.


ಅದಕ್ಕೆ ಸೌಲನು, “ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ,” ಎಂದನು.


ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು.


ನಾನು ಅವನಿಗೋಸ್ಕರ ದೇವರನ್ನು ಕೇಳಿಕೊಂಡದ್ದು ಅದೇ ಮೊದಲನೆಯದೋ? ಅಲ್ಲವೇ ಅಲ್ಲ. ಅರಸನು ತನ್ನ ಸೇವಕನ ಮೇಲಾದರೂ ಇಲ್ಲವೆ ಅವನ ಕುಟುಂಬದವರ ಮೇಲಾದರೂ ಇಂಥ ಅಪವಾದವನ್ನು ಹೊರಿಸಬಾರದು, ಏಕೆಂದರೆ ಆ ಕಾರ್ಯದ ಬಗ್ಗೆ ನಮಗೇನೂ ತಿಳಿದಿಲ್ಲ,” ಎಂದನು.


ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆ, “ನೀವು ತಿರುಗಿಕೊಂಡು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿರಿ. ಏಕೆಂದರೆ ಅವರ ಕೈ ದಾವೀದನಿಗೆ ಸಹಾಯಕವಾಗಿದೆ. ಅವನು ಓಡಿ ಹೋಗುವುದನ್ನು ಅವರು ತಿಳಿದಿದ್ದು, ಅದನ್ನು ನನಗೆ ತಿಳಿಸದೆ ಹೋದರು,” ಎಂದನು. ಆದರೆ ಅರಸನ ಸೇವಕರು ಯೆಹೋವ ದೇವರ ಯಾಜಕರ ಮೇಲೆ ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು