Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:17 - ಕನ್ನಡ ಸಮಕಾಲಿಕ ಅನುವಾದ

17 ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆ, “ನೀವು ತಿರುಗಿಕೊಂಡು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿರಿ. ಏಕೆಂದರೆ ಅವರ ಕೈ ದಾವೀದನಿಗೆ ಸಹಾಯಕವಾಗಿದೆ. ಅವನು ಓಡಿ ಹೋಗುವುದನ್ನು ಅವರು ತಿಳಿದಿದ್ದು, ಅದನ್ನು ನನಗೆ ತಿಳಿಸದೆ ಹೋದರು,” ಎಂದನು. ಆದರೆ ಅರಸನ ಸೇವಕರು ಯೆಹೋವ ದೇವರ ಯಾಜಕರ ಮೇಲೆ ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಿಪಾಯಿಗಳಿಗೆ, “ನೀವು ಯೆಹೋವನ ಈ ಯಾಜಕರನ್ನು ಕೊಲ್ಲಿರಿ. ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೇ ಅವನಿಗೆ ಸಹಾಯ ಮಾಡಿದ್ದಾರೆ” ಎಂದು ಹೇಳಿ ಅವರನ್ನು ಕೊಲ್ಲಲು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸು ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ, “ನೀವು ಹಿಂದಿರುಗಿ ಸರ್ವೇಶ್ವರನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಪಲಾಯನ ಆದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ,” ಎಂದು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಸರ್ವೇಶ್ವರನ ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸುಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀವು ತಿರುಗಿಕೊಂಡು ಯೆಹೋವನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಓಡಿಹೋದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ ಎಂದು ಹೇಳಿ ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಯೆಹೋವನ ಯಾಜಕರ ಮೇಲೆ ಕೈಹಾಕುವದಕ್ಕೆ ಮನಸ್ಸುಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಂತರ ರಾಜನು ತನ್ನ ಸಿಪಾಯಿಗಳಿಗೆ, “ನೀವು ಹೋಗಿ ಯೆಹೋವನ ಯಾಜಕರನ್ನು ಕೊಂದುಹಾಕಿ. ಅವರು ದಾವೀದನ ಪಕ್ಷ ವಹಿಸಿದ್ದಾರೆ. ದಾವೀದನು ಓಡಿಹೋಗುತ್ತಿರುವುದು ತಿಳಿದಿದ್ದರೂ ಅವರು ನನಗೆ ತಿಳಿಸಲಿಲ್ಲ!” ಎಂದನು. ಆದರೆ ಯೆಹೋವನ ಯಾಜಕರನ್ನು ಕೊಲ್ಲಲು ಸೈನಿಕರು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:17
15 ತಿಳಿವುಗಳ ಹೋಲಿಕೆ  

ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಈಜಿಪ್ಟಿನ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.


ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು.


ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.


ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ, ಯೇಹುವು ಕಾವಲುಗಾರರಿಗೂ, ಅಧಿಪತಿಗಳಿಗೂ, “ನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ,” ಎಂದನು. ಹಾಗೆಯೇ ಅವರು ಒಳಗೆ ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿ ಅವರ ಶವಗಳನ್ನು ಹೊರಗೆ ಹಾಕಿದ ತರುವಾಯ, ಬಾಳನ ಗರ್ಭಗುಡಿಯನ್ನು ಪ್ರವೇಶಿಸಿ,


ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.


ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು, “ನಾನು ಅರಸನಾಗಿರಬೇಕು,” ಎಂದುಕೊಂಡು, ತನಗೋಸ್ಕರ ರಥಗಳನ್ನೂ, ಸಾರಥಿಯರನ್ನೂ, ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿ ಪುರುಷರನ್ನೂ ಸಿದ್ಧಮಾಡಿದನು.


ಇದರ ತರುವಾಯ ಅಬ್ಷಾಲೋಮನು ತನಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.


ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು.


ಸೌಲನು ಅವನಿಗೆ, “ನೀನೂ, ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋಧವಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಯನ್ನೂ, ಖಡ್ಗವನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು? ಅವನು ಇಂದಿನವರೆಗೂ ನನ್ನನ್ನು ಕೊಲ್ಲುವುದಕ್ಕೆ ಕಾಯುತ್ತಿದ್ದಾನೆ?” ಎಂದು ಕೇಳಿದನು.


ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದ್ದರಿಂದ ಯೋನಾತಾನನು ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದನೆಂದು ತಿಳಿದುಕೊಂಡನು.


ಅವನು, “ನಿಮ್ಮನ್ನು ಆಳುವ ಅರಸನ ಅಧಿಕಾರವು ಏನೆಂದರೆ, ಅವನು ನಿಮ್ಮ ಪುತ್ರರನ್ನು ತನ್ನ ರಥಗಳಿಗೋಸ್ಕರ ಸಾರಥಿಗಳನ್ನಾಗಿಯೂ ಕುದುರೆ ಸವಾರರನ್ನಾಗಿಯೂ ತೆಗೆದುಕೊಳ್ಳುವನು. ಕೆಲವರು ಅವನ ರಥಗಳ ಮುಂದೆ ಓಡುವರು.


ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟದಹಾಗೆ, ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿನಗಳು ಬರುವುವು.


ಅದಕ್ಕೆ ಅರಸನು, “ಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯ ಸಮಸ್ತರೂ ನಿಶ್ಚಯವಾಗಿ ಸಾಯಲೇಬೇಕು,” ಎಂದನು.


ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು