Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ಅಹೀಟೂಬನ ಮಗನಾಗಿರುವ ಅಹೀಮೆಲೆಕನ ಮಕ್ಕಳಲ್ಲಿ ಒಬ್ಬನಾದ ಅಬಿಯಾತರನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬುವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಏಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಎಬ್ಯಾತಾರನು ತಪ್ಪಿಸಿಕೊಂಡನು. ಎಬ್ಯಾತಾರನು ಅಹೀಮೆಲೆಕನ ಮಗ. ಅಹೀಮೆಲೆಕನು ಅಹೀಟೂಬನ ಮಗ. ಎಬ್ಯಾತಾರನು ಓಡಿಹೋಗಿ ದಾವೀದನ ಜೊತೆ ಸೇರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:20
15 ತಿಳಿವುಗಳ ಹೋಲಿಕೆ  

ಅಹೀಮೆಲೆಕನ ಮಗ ಅಬಿಯಾತರನು ಕೆಯೀಲಾ ನಗರದಲ್ಲಿ ಇರುವ ದಾವೀದನ ಬಳಿಗೆ ಓಡಿ ಬಂದಾಗ, ಅವನ ಕೈಯಲ್ಲಿ ಏಫೋದು ಇತ್ತು.


ಆಗ ದಾವೀದನು ಅಹೀಮೆಲೆಕನ ಮಗ ಅಬಿಯಾತರನೆಂಬ ಯಾಜಕನಿಗೆ, “ನೀನು ದಯಮಾಡಿ ಏಫೋದನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ಅಬ್ಯತಾರನು ಏಫೋದನ್ನು ದಾವೀದನ ಬಳಿಗೆ ತಂದನು.


ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿದ್ದರಿಂದ ಯಾಜಕನಾದ ಅಬಿಯಾತರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದನು.


ಇದ್ದಕ್ಕಿದ್ದಂತೆ ಮರುಭೂಮಿ ಕಡೆಯಿಂದ ದೊಡ್ಡ ಗಾಳಿ ಬೀಸಿ, ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು. ಮನೆಯು ಯೌವನಸ್ಥರ ಮೇಲೆ ಬಿತ್ತು, ಅವರು ಸತ್ತುಹೋದರು. ನಾನೊಬ್ಬನು ಮಾತ್ರ, ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು.


ನನ್ನ ಬಲಿಪೀಠದ ಸೇವೆಯಿಂದ ನಾನು ತೆಗೆದು ಬಿಡದ ಮನುಷ್ಯನು, ನಿನ್ನ ಕಣ್ಣುಗಳನ್ನು ಕುಂದಿಸಿ, ನಿನ್ನ ಹೃದಯವನ್ನು ವೇದನೆ ಪಡಿಸುವುದಕ್ಕೆ ಇರುವನು. ನಿನ್ನ ಮನೆಯ ಸಂತತಿಯವರೆಲ್ಲಾ ಯೌವನ ಪ್ರಾಯದಲ್ಲಿಯೇ ಖಡ್ಗದಿಂದ ಸಾಯುವರು.


ಶೆವನು ಕಾರ್ಯದರ್ಶಿಯಾಗಿದ್ದನು. ಚಾದೋಕನೂ ಅಬಿಯಾತರನೂ ಯಾಜಕರಾಗಿದ್ದರು.


ಆಗ ಏಲಿಯ ಮಗ ಫೀನೆಹಾಸನ ಮಗ ಈಕಾಬೋದನ ಸಹೋದರ ಅಹೀಟೂಬನ ಮಗ ಅಹೀಯನು ಶೀಲೋವಿನಲ್ಲಿ ಏಫೋದನ್ನು ಧರಿಸಿಕೊಂಡು ಯೆಹೋವ ದೇವರ ಯಾಜಕನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.


ಸೌಲನು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಅಬಿಯಾತರನು ದಾವೀದನಿಗೆ ತಿಳಿಸಿದನು.


ಚಾದೋಕನೂ, ಅವನ ಸಂಗಡ ಇರುವ ಸಮಸ್ತ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಅಬಿಯಾತರನು, ಜನರೆಲ್ಲರು ಪಟ್ಟಣದಿಂದ ದಾಟಿಹೋಗುವವರೆಗೆ ಯಜ್ಞ ಸಮರ್ಪಿಸುತ್ತಾ ಮುಂದೆ ನಡೆಯುತ್ತಿದ್ದನು.


ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು.


ಆಗ ದಾವೀದನು ಚಾದೋಕನು, ಅಬಿಯಾತರನು ಎಂಬ ಯಾಜಕರನ್ನೂ; ಉರೀಯೇಲನು, ಅಸಾಯನು, ಯೋಯೇಲನು, ಶೆಮಾಯನು, ಎಲೀಯೇಲನು, ಅಮ್ಮೀನಾದಾಬನು ಎಂಬ ಲೇವಿಯರನ್ನೂ ಕರೆಕಳುಹಿಸಿ ಅವರಿಗೆ,


ಅಹೀಟೂಬನ ಮಗ ಚಾದೋಕನೂ, ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಕಾರ್ಯದರ್ಶಿಯಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು