Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:23 - ಕನ್ನಡ ಸಮಕಾಲಿಕ ಅನುವಾದ

23 ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಏಕೆಂದರೆ ನನ್ನ ಪ್ರಾಣವನ್ನು ಹುಡುಕುವವನು ನಿನ್ನ ಪ್ರಾಣವನ್ನು ಹುಡುಕುವನು; ನೀನು ನನ್ನ ಸಂಗಡ ಇದ್ದರೆ ಸುರಕ್ಷಿತನಾಗಿರುವಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀನಾದರೋ ಹೆದರದೆ ನನ್ನ ಸಂಗಡ ಇರು. ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವುದಾದರೆ ಸುರಕ್ಷಿತನಾಗಿರುವಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನೀನಾದರೋ ಹೆದರದೆ ನನ್ನ ಸಂಗಡ ಇರು; ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನು ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿ ಇರುವುದಾದರೆ ಸುರಕ್ಷಿತನಾಗಿರುವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನಾದರೋ ಹೆದರದೆ ನನ್ನ ಸಂಗಡ ಇರು; ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನೇ ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿರುವದಾದರೆ ಸುರಕ್ಷಿತನಾಗಿರುವಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಿನ್ನನ್ನು ಕೊಲ್ಲಲು ಯಾವ ಮನುಷ್ಯ ಬಯಸಿರುವನೋ ಅವನು ನನ್ನನ್ನು ಸಹ ಕೊಲ್ಲಲು ಬಯಸಿದ್ದಾನೆ. ನನ್ನ ಜೊತೆಯಲ್ಲಿರು. ಆಗ ನೀನು ಸುರಕ್ಷಿತವಾಗಿರುವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:23
11 ತಿಳಿವುಗಳ ಹೋಲಿಕೆ  

ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು.


ಹೀಗೆ, “ನೀನು ನನಗೆ ಕೊಟ್ಟವರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ,” ಎಂದು ತಾವೇ ಹೇಳಿದ ಮಾತು ನೆರವೇರಿತು.


‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.


ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


“ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.


ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು.


ಯೋನಾತಾನನು ಅವನಿಗೆ, “ಭಯಪಡಬೇಡ, ಏಕೆಂದರೆ ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವುದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ. ನಾನು ನಿನಗೆ ಎರಡನೆಯವನಾಗಿರುವೆನು ಮತ್ತು ಹೀಗೆ ಆಗುವುದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ,” ಎಂದನು.


ಆಗ ದಾವೀದನು ಅವನಿಗೆ, “ಭಯಪಡಬೇಡ, ಏಕೆಂದರೆ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆ ತೋರಿಸುವೆನು. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರುಗಿ ಕೊಡುವೆನು ಮತ್ತು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು