Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:3 - ಕನ್ನಡ ಸಮಕಾಲಿಕ ಅನುವಾದ

3 ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆ, “ದೇವರು ನನಗೆ ಏನು ಮಾಡುವರೋ ಎಂದು ನಾನು ತಿಳಿಯುವವರೆಗೂ, ನನ್ನ ತಂದೆತಾಯಿಗಳು ಹೊರಟುಬಂದು ನಿನ್ನ ಬಳಿಯಲ್ಲಿ ವಾಸಿಸಿರಲಿ,” ಎಂದು ಹೇಳಿ, ಅವರನ್ನು ಮೋವಾಬಿನ ಅರಸನ ಬಳಿಗೆ ಕರೆತಂದು ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋಗಿ ಅಲ್ಲಿಯ ಅರಸನಿಗೆ, “ದೇವರು ನನಗೆ ಮಾರ್ಗತೋರಿಸುವವರೆಗೆ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು” ಎಂದು ಬೇಡಿಕೊಂಡು, ಅವರನ್ನು ಅವನ ಬಳಿಯಲ್ಲಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋದನು. ಅಲ್ಲಿನ ರಾಜನನ್ನು, “ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿಮ್ಮ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್‍ದೇಶದ ವಿುಚ್ಪೆ ಎಂಬಲ್ಲಿಗೆ ಕರಕೊಂಡು ಹೋಗಿ ಅಲ್ಲಿನ ಅರಸನನ್ನು - ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿನ್ನ ಬಳಿಯಲ್ಲಿರುವದಕ್ಕೆ ಅಪ್ಪಣೆಯಾಗಬೇಕೆಂದು ಬೇಡಿಕೊಂಡು ಅವರನ್ನು ಅವನ ಬಳಿಯಲ್ಲಿ ಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಾವೀದನು ಅದುಲ್ಲಾಮನ್ನು ಬಿಟ್ಟು ಮೋವಾಬಿನ ಮಿಚ್ಪೆಗೆ ಹೋದನು. ದಾವೀದನು ಮೋವಾಬ್ ರಾಜನಿಗೆ, “ದೇವರು ನನಗೇನು ಮಾಡುತ್ತಾನೆಂಬುದನ್ನು ನಾನು ತಿಳಿದುಕೊಳ್ಳುವ ತನಕ, ನನ್ನ ತಂದೆತಾಯಿಗಳು ನಿನ್ನಲ್ಲಿಗೆ ಬಂದು ಇರಲು ದಯವಿಟ್ಟು ನನಗೆ ಅವಕಾಶ ಕೊಡು” ಎಂದು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:3
15 ತಿಳಿವುಗಳ ಹೋಲಿಕೆ  

ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.


ಹೀಗೆ ಸೌಲನು ಇಸ್ರಾಯೇಲಿನ ದೊರೆತನವನ್ನು ತೆಗೆದುಕೊಂಡು, ಸುತ್ತಲಿರುವ ತನ್ನ ಸಮಸ್ತ ಶತ್ರುಗಳಾದ ಮೋವಾಬ್ಯರ ಮೇಲೆಯೂ, ಅಮ್ಮೋನ್ಯರ ಮೇಲೆಯೂ, ಎದೋಮ್ಯರ ಮೇಲೆಯೂ, ಚೋಬದ ಅರಸರ ಮೇಲೆಯೂ, ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ, ಅವರನ್ನು ಪೀಡಿಸಿದನು.


ಹಾಗೆಯೇ ಸಮುಯೇಲನು ಅವನಿಗೆ ಒಂದನ್ನೂ ಮರೆಮಾಡದೆ, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು, “ಅವರು ಯೆಹೋವ ದೇವರು. ಅವರಿಗೆ ಸರಿತೋರುವುದನ್ನು ಮಾಡಲಿ,” ಎಂದನು.


ಆಗ ನೆರೆಹೊರೆಯ ಸ್ತ್ರೀಯರು ನೊವೊಮಿಗೆ, “ಒಬ್ಬ ಮಗನು ಹುಟ್ಟಿದ್ದಾನೆ,” ಎಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆಯಾದವನು.


ಇದಲ್ಲದೆ ಸತ್ತವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆಯು ಗತಿಸಿದ ಮಹ್ಲೋನನ ಹೆಸರಿನಲ್ಲಿಯೇ ಉಳಿಯುವುದು. ಅವನ ಹೆಸರೂ ಅವನ ವಂಶವೂ ಊರಲ್ಲಿಯೇ ನೆಲೆಯಾಗಿರುವುದು. ಇದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ,” ಎಂದನು.


ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು.


ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.


ಯೋಸೇಫನು ತನ್ನ ತಂದೆಗೂ, ತನ್ನ ಸಹೋದರರಿಗೂ ನಿವಾಸವನ್ನು ಕೊಟ್ಟು, ಫರೋಹನ ಅಪ್ಪಣೆಯ ಪ್ರಕಾರ, ಅವರಿಗೆ ಈಜಿಪ್ಟ್ ದೇಶದ ಉತ್ತಮವಾದ ರಮ್ಸೇಸ್ ಸೀಮೆಯ ಸ್ವತ್ತನ್ನು ಕೊಟ್ಟನು.


ಇದಲ್ಲದೆ ಶ್ರಮಪಟ್ಟವರೂ, ಸಾಲಗಾರರೂ, ಅಸಂತುಷ್ಟರೂ ಅವನ ಸಂಗಡ ಕೂಡಿಕೊಂಡರು. ಆಗ ದಾವೀದನು ಅವರಿಗೆ ಅಧಿಪತಿಯಾದನು. ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.


ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ, ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.


ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು