Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:16 - ಕನ್ನಡ ಸಮಕಾಲಿಕ ಅನುವಾದ

16 ದಾವೀದನ ಮಾತುಗಳು ಮುಗಿದ ನಂತರ, ಸೌಲನು ದಾವೀದನಿಗೆ, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಎಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದಾವೀದನ ಮಾತುಗಳು ಮುಗಿದ ನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಅಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದಾವೀದನ ಮಾತುಗಳು ಮುಗಿದನಂತರ ಸೌಲನು - ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ ಅಂದು ಗಟ್ಟಿಯಾಗಿ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಾವೀದನು ಈ ಮಾತುಗಳನ್ನು ಹೇಳಿದಾಗ ಸೌಲನು, “ನನ್ನ ಮಗನಾದ ದಾವೀದನೇ, ಇದು ನಿನ್ನ ಧ್ವನಿಯೇ?” ಎಂದು ಕೇಳಿದನು. ನಂತರ ಸೌಲನು ಅಳಲಾರಂಭಿಸಿದನು. ಸೌಲನು ಬಹಳ ಅತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:16
13 ತಿಳಿವುಗಳ ಹೋಲಿಕೆ  

ಆಗ ಸೌಲನು ದಾವೀದನ ಸ್ವರವನ್ನು ತಿಳಿದುಕೊಂಡು, “ನನ್ನ ಪುತ್ರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ?” ಎಂದನು. ದಾವೀದನು, “ಅರಸನಾದ ನನ್ನ ಒಡೆಯನೇ, ನನ್ನ ಧ್ವನಿಯೇ ಹೌದು,” ಎಂದನು.


ಆದರೆ ಅವನು ಜ್ಞಾನದಿಂದಲೂ ಪವಿತ್ರಾತ್ಮ ದೇವರಿಂದಲೂ ಮಾತನಾಡಿದ್ದರಿಂದ ಅವರಿಗೆ ಅವನನ್ನು ಎದುರಿಸಲು ಸಾಧ್ಯವಾಗಲಿಲ್ಲ.


ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.


ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.


ಯಥಾರ್ಥ ಮಾತುಗಳು ಎಷ್ಟೋ ನೋವನ್ನು ತರುತ್ತವೆ! ಆದರೆ ನಿಮ್ಮ ತರ್ಕವು ರುಜುಪಡಿಸುವುದೇನು?


ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು, ಅವನನ್ನು ಅಪ್ಪಿಕೊಂಡು, ಅವನ ಕೊರಳಿನ ಮೇಲೆ ಬಿದ್ದು, ಅವನಿಗೆ ಮುದ್ದಿಟ್ಟನು. ಅವರಿಬ್ಬರೂ ಅತ್ತರು.


ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.


ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.


ಸಾರಯಳು ಅಬ್ರಾಮನಿಗೆ, “ನನಗೆ ಆದ ಅನ್ಯಾಯಕ್ಕೆ ನೀನೇ ಹೊಣೆ. ನಾನು ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರಕ್ಕೆ ಯೋಗ್ಯಳಾದೆನು. ಯೆಹೋವ ದೇವರು ನಿನಗೂ ನನಗೂ ನ್ಯಾಯತೀರಿಸಲಿ,” ಎಂದಳು.


ಆದ್ದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧ ಮಾಡುವುದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀಯೆ. ನ್ಯಾಯಾಧಿಪತಿಯಾದ ಯೆಹೋವ ದೇವರು ಈ ಹೊತ್ತು ಇಸ್ರಾಯೇಲರಿಗೂ, ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು.


ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ, ಹಾಗೆಯೇ ನನ್ನ ಪ್ರಾಣವು ಯೆಹೋವ ದೇವರ ದೃಷ್ಟಿಗೆ ದೊಡ್ಡದಾಗಿರಲಿ. ಅವರು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ,” ಎಂದನು.


ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.


ನನ್ನ ಪರವಾಗಿ ವಾದಿಸಿ, ನನ್ನನ್ನು ವಿಮೋಚಿಸಿರಿ; ನಿಮ್ಮ ವಾಗ್ದಾನದ ಪ್ರಕಾರ ನನ್ನ ಬದುಕನ್ನು ಕಾಪಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು