Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:18 - ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಾಗ, ನೀನು ನನ್ನನ್ನು ಕೊಂದುಹಾಕದೆ ಇದ್ದುದರಿಂದ, ನೀನು ನನಗೆ ಉಪಕಾರ ಮಾಡಿದ್ದನ್ನು ಈ ಹೊತ್ತು ತೋರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ಹೊತ್ತು ಪ್ರಕಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ; ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬದು ಈ ಹೊತ್ತು ಪ್ರಕಟವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀನು ನನಗೆ ಮಾಡಿದ ಒಳ್ಳೆಯ ಕಾರ್ಯಗಳ ಬಗ್ಗೆ ನನಗೆ ತಿಳಿಸಿರುವೆ. ಯೆಹೋವನು ನನ್ನನ್ನು ನಿನ್ನ ಬಳಿಗೆ ಕರೆದು ತಂದನು, ಆದರೆ ನೀನು ನನ್ನನ್ನು ಕೊಲ್ಲಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:18
10 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು.


ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ; ನನ್ನ ಪಾದಗಳನ್ನು ವಿಶಾಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀರಿ.


ಆಗ ಅಬೀಷೈಯನು ದಾವೀದನಿಗೆ, “ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಿಂದ ನೆಲಕ್ಕೆ ಹತ್ತುವಂತೆ ತಿವಿಯಲು ಅಪ್ಪಣೆಕೊಡಬೇಕು; ಎರಡು ಸಾರಿ ಹೊಡೆಯುವುದಿಲ್ಲ,” ಎಂದನು.


ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ.


ಅನಂತರ ದಾವೀದನು, “ಕೆಯೀಲಾ ಪಟ್ಟಣದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ?” ಎಂದು ಕೇಳಿದನು. ಯೆಹೋವ ದೇವರು, “ಅವರು ಒಪ್ಪಿಸಿಕೊಡುವರು,” ಎಂದರು.


ದಾವೀದನು ಕೆಯೀಲಾ ನಗರಕ್ಕೆ ಬಂದಿದ್ದಾನೆ ಎಂಬ ವಿಷಯ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ಅವನು ಬಾಗಿಲುಗಳೂ, ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಈಗ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.


ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ.


ಆಗ ಯೆಹೂದನು ಅವುಗಳನ್ನು ಗುರುತಿಸಿ, “ಆಕೆಯು ನನಗಿಂತ ನೀತಿವಂತಳು, ಏಕೆಂದರೆ ನಾನು ನನ್ನ ಮಗ ಶೇಲಹನಿಗೆ ಅವಳನ್ನು ಕೊಡಲಿಲ್ಲ,” ಎಂದನು. ಅವನು ಮತ್ತೆ ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.


ಆಗ ನನ್ನ ವೈರಿಯು ಬೆನ್ನಟ್ಟಿ ನನ್ನನ್ನು ಹಿಡಿದುಕೊಳ್ಳಲಿ. ನನ್ನ ಜೀವವನ್ನು ನೆಲಕ್ಕೆ ಹಾಕಿ ತುಳಿದು ಬಿಡಲಿ ಮತ್ತು ನನ್ನ ಮಾನವನ್ನು ಮಣ್ಣು ಪಾಲಾಗುವಂತೆ ಮಾಡಲಿ.


ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು