Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:9 - ಕನ್ನಡ ಸಮಕಾಲಿಕ ಅನುವಾದ

9 ಸೌಲನಿಗೆ ದಾವೀದನು, “ಇಗೋ, ದಾವೀದನು ನಿನಗೆ ಕೇಡು ಮಾಡಲು ಹುಡುಕುತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಏಕೆ ಕೇಳುತ್ತಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ದಾವೀದನು ನಿನಗೆ ಕೇಡುಮಾಡಬೇಕೆಂದಿರುತ್ತಾನೆಂದು ಹೇಳುವವರ ಮಾತಿಗೆ ನೀನೇಕೆ ಕಿವಿಗೊಡುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ನಿಮಗೆ ನಾನು ಕೇಡುಮಾಡಬೇಕೆಂದಿದ್ದೇನೆಂದು ಹೇಳುವವರ ಮಾತಿಗೆ ನೀವು ಕಿವಿಗೊಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ದಾವೀದನು ನಿನಗೆ ಕೇಡುಮಾಡಬೇಕೆಂದಿರುತ್ತಾನೆಂದು ಹೇಳುವವರ ಮಾತಿಗೆ ನೀನೇಕೆ ಕಿವಿಗೊಡುತ್ತೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “‘ದಾವೀದನು ನಿನಗೆ ಕೇಡುಮಾಡಲು ಸಂಚುಗಳನ್ನು ಮಾಡುತ್ತಿದ್ದಾನೆ’ ಎಂಬುದಾಗಿ ಜನರು ಹೇಳುವಾಗ ನೀನು ಕೇಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:9
19 ತಿಳಿವುಗಳ ಹೋಲಿಕೆ  

ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ.


ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.


ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ಹಗೆ ಮಾಡುವನು; ಮುಖಸ್ತುತಿ ಮಾಡುವ ಬಾಯಿಯು ನಾಶವನ್ನುಂಟುಮಾಡುತ್ತದೆ.


ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ.


ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.


ಕೇಡು ಮಾಡುವವನು ಕೆಟ್ಟ ಮಾತುಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು.


ಮೂರ್ಖನು ಜಗಳವನ್ನು ಬಿತ್ತುತ್ತಾನೆ. ಚಾಡಿಕೋರನು ಪ್ರಮುಖ ಸ್ನೇಹಿತರನ್ನು ಅಗಲಿಸುತ್ತಾನೆ.


ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ ಅವರು ನನ್ನ ಮಾತು ಕೇಳುವರು.


ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು.


ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.


“ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.


ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು, ಅವನ ಮುಂದೆ, “ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣವನ್ನು ಹುಡುಕುವ ಹಾಗೆ ನಾನು ಅವನಿಗೆ ಮಾಡಿದ ದ್ರೋಹವೇನು?” ಎಂದನು.


ತರುವಾಯ ದಾವೀದನು ಎದ್ದು ಗವಿಯಿಂದ ಹೊರಗೆ ಬಂದು ಸೌಲನಿಗೆ, “ಅರಸನೇ, ನನ್ನ ಒಡೆಯನೇ,” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ, ದಾವೀದನು ನೆಲದವರೆಗೆ ಬಗ್ಗಿ ವಂದಿಸಿದನು.


ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ.


“ನನ್ನ ಒಡೆಯನು ತನ್ನ ಸೇವಕನನ್ನು ಹೀಗೆ ಹಿಂದಟ್ಟುವುದೇನು? ನಾನೇನು ಮಾಡಿದೆನು?


ಇದಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇನೆಂದರೆ: “ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ, ನಿನ್ನ ಸೇವಕರಿಗೂ, ಈ ಜನರಿಗೂ ವಿರೋಧವಾಗಿ ಏನು ಅಪರಾಧ ಮಾಡಿದ್ದೇನೆ?


ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು