Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:22 - ಕನ್ನಡ ಸಮಕಾಲಿಕ ಅನುವಾದ

22 ಬೆಳಗಾಗುವಷ್ಟರಲ್ಲಿ ಅವನ ಜನರಲ್ಲಿ ನಾನು ಒಬ್ಬ ಗಂಡಸನನ್ನಾದರೂ ಉಳಿಸಿದರೆ, ದೇವರು ದಾವೀದನಾದ ನನಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ,” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ!” ಎಂದು ಪ್ರತಿಜ್ಞೆ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ ಎಂದು ಪ್ರತಿಜ್ಞೆಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾಳೆ ಬೆಳಗಾಗುವುದರೊಳಗಾಗಿ ನಾಬಾಲನ ಕುಟುಂಬದಲ್ಲಿ ಒಬ್ಬರಾದರೂ ಜೀವದಿಂದ ಉಳಿದುಕೊಳ್ಳಲು ನಾನು ಅವಕಾಶಕೊಟ್ಟರೆ ದೇವರು ನನ್ನನ್ನು ದಂಡಿಸಲಿ” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:22
9 ತಿಳಿವುಗಳ ಹೋಲಿಕೆ  

“ ‘ಆದ್ದರಿಂದ ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ, ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ, ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟುಕೊಂಡವರನ್ನೂ ಕಡಿದುಬಿಟ್ಟು, ಅದು ತೀರುವವರೆಗೆ ಮನುಷ್ಯನು ರಸವನ್ನು ಹೇಗೆ ತೆಗೆದು ಹಾಕುತ್ತಾನೋ, ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಉಳುವಿಕೆಯನ್ನು ತೆಗೆದುಹಾಕುತ್ತೇನೆ.


ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ.


ಏಲಿಯು ಅವನಿಗೆ, “ಅವರು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಅವರು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವುದನ್ನಾದರೂ ನನಗೆ ಮರೆಮಾಡಿದರೆ, ದೇವರು ನಿನ್ನನ್ನು ದಂಡಿಸಲಿ,” ಎಂದನು.


‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ, ನಿನ್ನ ಸಂತತಿಯನ್ನು ತೆಗೆದುಹಾಕಿ, ಅಹಾಬನಿಗೆ ಒಬ್ಬ ಗಂಡು ಮಗುವನ್ನಾದರೂ ಉಳಿಸದೆ ಇಸ್ರಾಯೇಲಿನಲ್ಲಿ ಎಲ್ಲರನ್ನು ತೆಗೆದುಹಾಕಿಬಿಡುವೆನು.


ಅಹಾಬನ ಮನೆಯೆಲ್ಲಾ ನಾಶವಾಗುವುದು. ಇಸ್ರಾಯೇಲಿನಲ್ಲಿ ಉಳಿದಿರುವ ಅಹಾಬನ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮರಾಗಲಿ ಎಲ್ಲರನ್ನೂ ತೆಗೆದುಹಾಕುವೆನು.


ಜಿಮ್ರಿಯು ಆಳಲು ಆರಂಭಿಸಿದಾಗ, ಅವನು ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಲೇ, ಬಾಷನ ಮನೆಯವರನ್ನೆಲ್ಲಾ ಸಂಹರಿಸಿ, ಅವನ ಬಂಧುಗಳಲ್ಲಿಯೂ, ಅವನ ಸ್ನೇಹಿತರಲ್ಲಿಯೂ ಒಬ್ಬ ಗಂಡಸನನ್ನೂ ಉಳಿಸಲಿಲ್ಲ.


ಹೀಗೆಯೇ ಯೋನಾತಾನನು ದಾವೀದನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು, “ಅಗಲಿದರೆ ಯೆಹೋವ ದೇವರೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ,” ಎಂದನು.


ಅದಕ್ಕೆ ಸೌಲನು, “ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ,” ಎಂದನು.


ನೀವು ಎಲ್ಲಿ ಸಾಯುತ್ತೀರೋ ಅಲ್ಲಿಯೇ ನಾನು ಸಾಯುವೆನು. ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಿಂದಲ್ಲದೆ ನಾನು ನಿಮ್ಮನ್ನು ಅಗಲಿದರೆ ಯೆಹೋವ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು