Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:31 - ಕನ್ನಡ ಸಮಕಾಲಿಕ ಅನುವಾದ

31 ನೀನು ಸುಮ್ಮನೆ ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿಗೆ ಮುಯ್ಯಿ ತೀರಿಸಿಕೊಂಡದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆದರೆ ನನ್ನ ಒಡೆಯನನ್ನು ಯೆಹೋವ ದೇವರು ಚೆನ್ನಾಗಿ ನಡೆಸಿದಾಗ, ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ನಿರಪರಾಧಿಯ ರಕ್ತವನ್ನು ಸುರಿಸಿ ಸೇಡುತೀರಿಸಿಕೊಂಡದ್ದಕ್ಕಾಗಿ ವಿಷಾದ, ಪಶ್ಚಾತ್ತಾಪಗಳಿಗೆ ಕಾರಣವಿರುವುದಿಲ್ಲ. ಸರ್ವೇಶ್ವರ ನಿಮ್ಮನ್ನು ಮಹಾಪದವಿಗೆ ಏರಿಸುವಾಗ ನಿಮ್ಮ ದಾಸಿಯಾದ ನನ್ನನ್ನು ಮರೆತುಬಿಡಬೇಡಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿತೀರಿಸಿದ್ದರಿಂದುಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆತನು ನಿನ್ನನ್ನು ಮಹಾಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿರಪರಾಧಿಗಳ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನು ಗುರಿಯಾಗುವುದಿಲ್ಲ; ನೀನು ಆ ಬಲೆಗೂ ಬೀಳುವುದಿಲ್ಲ. ನೀನು ಆ ಮಹಾಪದವಿಗೆ ಬಂದಾಗ ನನ್ನನ್ನು ಮರೆತುಬಿಡಬೇಡ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:31
13 ತಿಳಿವುಗಳ ಹೋಲಿಕೆ  

ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಪಿಸಿಕೊಂಡು, ನನಗೆ ದಯೆತೋರಿಸಿ, ಫರೋಹನ ಮುಂದೆ ನನ್ನ ವಿಷಯ ತಿಳಿಸಿ, ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರುವಂತೆ ಮಾಡಬೇಕು.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಮಾಂಸ ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ ಅಥವಾ ಬೇರೆ ಏನನ್ನೇ ಆಗಲಿ, ಅದು ನಿಮ್ಮ ಸಹೋದರರನ್ನು ಎಡವುವಂತೆ ಮಾಡುವುದಾದರೆ ಅದನ್ನು ಮಾಡದೆ ಇರುವುದೇ ಒಳ್ಳೆಯದು.


ಬಳಿಕ ಅವನು, “ಯೇಸುವೇ, ನೀವು ನಿಮ್ಮ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪುಮಾಡಿಕೊಳ್ಳಿರಿ,” ಎಂದನು.


ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.


ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.


ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು.


ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನು,” ಎಂದು ಹೇಳಿದರು.


ನಿನ್ನ ಬುದ್ಧಿಮಾತಿಗಾಗಿಯೂ, ನಾನು ರಕ್ತ ಚೆಲ್ಲುವುದಕ್ಕೂ, ನನ್ನ ಕೈಯಿಂದ ನನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಈ ಹೊತ್ತು ನನ್ನನ್ನು ತಡೆದ ನಿನಗೆ ಆಶೀರ್ವಾದ ಆಗಲಿ.


ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು.


ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಯೆಹೋವ ದೇವರು ಹೇಳಿದ ಒಳ್ಳೆಯದೆಲ್ಲವನ್ನು ನಿನಗೆ ಮಾಡಿ, ನಿನ್ನನ್ನು ಇಸ್ರಾಯೇಲರ ಮೇಲೆ ನಾಯಕನಾಗಿ ನೇಮಿಸಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು