Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:33 - ಕನ್ನಡ ಸಮಕಾಲಿಕ ಅನುವಾದ

33 ನಿನ್ನ ಬುದ್ಧಿಮಾತಿಗಾಗಿಯೂ, ನಾನು ರಕ್ತ ಚೆಲ್ಲುವುದಕ್ಕೂ, ನನ್ನ ಕೈಯಿಂದ ನನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಈ ಹೊತ್ತು ನನ್ನನ್ನು ತಡೆದ ನಿನಗೆ ಆಶೀರ್ವಾದ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಸ್ವಹಸ್ತದಿಂದ ಮುಯ್ಯಿ ತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ, ನಿನ್ನ ಬುದ್ಧಿಯೂ ಸ್ತೋತ್ರಾರ್ಹವೆ. ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಸ್ವಹಸ್ತದಿಂದ ಸೇಡುತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ ನಿನ್ನ ಜಾಣ್ಮೆಯೂ ಸ್ತುತ್ಯರ್ಹವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ ನಿನ್ನ ಬುದ್ಧಿಯೂ ಸ್ತೋತ್ರಾರ್ಹವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಿನ್ನ ಒಳ್ಳೆಯ ತೀರ್ಪಿಗಾಗಿ ದೇವರು ನಿನ್ನನ್ನು ಆಶೀರ್ವದಿಸಲಿ. ಈ ದಿನ ನಾನು ನಿರ್ದೋಷಿಗಳನ್ನು ಕೊಲ್ಲದಂತೆ ನೀನು ನನ್ನನ್ನು ತಡೆದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:33
12 ತಿಳಿವುಗಳ ಹೋಲಿಕೆ  

ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.


ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.


ಬೆಳ್ಳಿ, ಬಂಗಾರಗಳ ಪುಟಕ್ಕೆ ಕುಲುಮೆ ಹೇಗೆಯೋ, ಹಾಗೆಯೇ ಹೊಗಳಿಕೆಯು ಮನುಷ್ಯನನ್ನು ಪರೀಕ್ಷಿಸುತ್ತದೆ.


ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.


ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟುತ್ತದೆ.


ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು.


ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.


ನೀನು ಸುಮ್ಮನೆ ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿಗೆ ಮುಯ್ಯಿ ತೀರಿಸಿಕೊಂಡದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆದರೆ ನನ್ನ ಒಡೆಯನನ್ನು ಯೆಹೋವ ದೇವರು ಚೆನ್ನಾಗಿ ನಡೆಸಿದಾಗ, ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು,” ಎಂದಳು.


ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ.


“ಒಬ್ಬ ಕಳ್ಳನು ಮನೆ ಮುರಿಯುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಹೊಡೆದುಕೊಂದರೆ, ಹೊಡೆದವನ ರಕ್ತ ಸುರಿಸಬಾರದು.


ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು