Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:38 - ಕನ್ನಡ ಸಮಕಾಲಿಕ ಅನುವಾದ

38 ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ, ಯೆಹೋವ ದೇವರ ದಂಡನೆಯ ನಿಮಿತ್ತ ನಾಬಾಲನು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಸುಮಾರು ಹತ್ತು ದಿನಗಳಾದನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಸರ್ವೇಶ್ವರ ವಿಧಿಸಿದ ದಂಡನೆಯ ನಿಮಿತ್ತ ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಸತ್ತುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಯೆಹೋವನಿಂದ ಹತನಾಗಿ ಸತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಹತ್ತು ದಿನಗಳಾದ ಮೇಲೆ, ಯೆಹೋವನು ನಾಬಾಲನಿಗೆ ಸಾವನ್ನು ಬರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:38
13 ತಿಳಿವುಗಳ ಹೋಲಿಕೆ  

ಇದಲ್ಲದೆ ಇನ್ನೂ ದಾವೀದನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರೇ ಅವನನ್ನು ಹೊಡೆಯುವರು, ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು, ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.


ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.


ಅರಸನು ಜನರ ಮಾತನ್ನು ಕೇಳದೆಹೋದದ್ದು ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಯೆಹೋವ ದೇವರು ಅರಸನನ್ನು ಮರಣದ ದಿವಸದವರೆಗೂ ಕುಷ್ಠರೋಗದಿಂದ ಬಾಧಿಸಿದ್ದರಿಂದ, ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.


ಆಗ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು, ಅಂಥ ಅಗೌರವಕ್ಕಾಗಿ ದೇವರು ಅವನನ್ನು ಶಿಕ್ಷಿಸಿದರು; ಅವನು ಅಲ್ಲಿಯೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.


ನಿನ್ನ ಬುದ್ಧಿಮಾತಿಗಾಗಿಯೂ, ನಾನು ರಕ್ತ ಚೆಲ್ಲುವುದಕ್ಕೂ, ನನ್ನ ಕೈಯಿಂದ ನನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಈ ಹೊತ್ತು ನನ್ನನ್ನು ತಡೆದ ನಿನಗೆ ಆಶೀರ್ವಾದ ಆಗಲಿ.


ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು.


ಮಧ್ಯರಾತ್ರಿಯಲ್ಲಿ ಸಿಂಹಾಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಎಂದರೆ ಈಜಿಪ್ಟ್ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ, ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಯೆಹೋವ ದೇವರು ಸಂಹರಿಸಿದರು.


ಉದಯದಲ್ಲಿ ನಾಬಾಲನ ದ್ರಾಕ್ಷಾರಸದ ಅಮಲು ಇಳಿದಾಗ, ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು, ಹೃದಯಾಘಾತವಾಗಿ ಅವನು ಕಲ್ಲಿನ ಹಾಗಾದನು.


ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲಿಲ್ಲ. ಯೆಹೋವ ದೇವರ ಶಿಕ್ಷೆಯಿಂದ ಯಾರೊಬ್ಬಾಮನು ಸತ್ತನು.


ನೀವು ನಿಮ್ಮ ಮುಖವನ್ನು ಮರೆಮಾಡಲು, ಅವು ಹೆದರುತ್ತವೆ. ನೀವು ಅವುಗಳ ಶ್ವಾಸವನ್ನು ತೆಗೆದುಬಿಡಲು, ಸತ್ತು ಹೋಗಿ, ಮಣ್ಣುಪಾಲಾಗುತ್ತವೆ.


ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು