Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:11 - ಕನ್ನಡ ಸಮಕಾಲಿಕ ಅನುವಾದ

11 ನಾನು ನನ್ನ ಕೈಯನ್ನು ಯೆಹೋವ ದೇವರ ಅಭಿಷಿಕ್ತನ ಮೇಲೆ ಹಾಕದ ಹಾಗೆ ಯೆಹೋವ ದೇವರು ನನಗೆ ತಡೆಯಲಿ. ಈಗ ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೋ ನಾವು ಹೋಗೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತನ್ನ ಅಭಿಷಿಕ್ತನಿಗೆ ಕೈಯೆತ್ತದಂತೆ ಯೆಹೋವನು ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನು, ನೀರಿನ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಸರ್ವೇಶ್ವರನೇ ನನ್ನನ್ನು ತಡೆಯಲಿ. ಈಗ ಬಾ, ಅವನ ತಲೆಯ ಬಳಿಯಲ್ಲಿರುವ ಭರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತನ್ನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನ್ನನ್ನು ತಡೆಯಲಿ. ಈಗ ಅವನ ತಲೆಯ ಬಳಿಯಲ್ಲಿರುವ ಬರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದರೆ ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನನ್ನು ನಾನು ಕೊಲ್ಲುವಂತಹ ಪರಿಸ್ಥಿತಿಯನ್ನು ಎಂದಿಗೂ ನನಗೆ ಕೊಡದಂತೆ ಯೆಹೋವನಲ್ಲಿ ಪ್ರಾರ್ಥಿಸುತ್ತೇನೆ! ಈಗ ಸೌಲನ ತಲೆಯ ಹತ್ತಿರವಿರುವ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೊಂಡ ನಂತರ ನಾವು ಹೋಗೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:11
11 ತಿಳಿವುಗಳ ಹೋಲಿಕೆ  

ದಾವೀದನು ತನ್ನ ಜನರಿಗೆ, “ಅವನು ಯೆಹೋವ ದೇವರ ಅಭಿಷಿಕ್ತನಾದದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ, ನನ್ನ ಒಡೆಯನಿಗೆ ಈ ಕಾರ್ಯ ಮಾಡುವುದನ್ನು ಯೆಹೋವ ದೇವರು ತಡೆಯಲಿ,” ಎಂದನು.


ಯೆಹೋವ ದೇವರು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ. ಹೌದು, ಯೆಹೋವ ದೇವರು ತಾವೇ ನನಗೋಸ್ಕರ ನಿನ್ನ ವಿಷಯವಾಗಿ ಮುಯ್ಯಿಗೆ ಮುಯ್ಯಿ ಮಾಡಲಿ. ಆದರೆ ನಾನು ನಿನ್ನ ಮೇಲೆ ನನ್ನ ಕೈಯೆತ್ತುವುದಿಲ್ಲ.


ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.


ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು.


ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.


ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.


ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.


ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.


ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು.


ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು