Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:12 - ಕನ್ನಡ ಸಮಕಾಲಿಕ ಅನುವಾದ

12 ದಾವೀದನು ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೊಂಡನು. ಅವರು ಹೊರಟು ಹೋದರು. ಒಬ್ಬರಾದರೂ ನೋಡಲಿಲ್ಲ ಇಲ್ಲವೆ ತಿಳಿದುಕೊಳ್ಳಲಿಲ್ಲ, ಅರಿತಿದ್ದಿಲ್ಲ, ಯಾರೂ ಎಚ್ಚೆತ್ತಿರಲಿಲ್ಲ. ಏಕೆಂದರೆ ಯೆಹೋವ ದೇವರಿಂದ ಗಾಢನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರು ಗಾಢ ನಿದ್ರೆಯಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಬರ್ಜಿ ಮತ್ತು ನೀರಿನ ತಂಬಿಗೆಯನ್ನು ತೆಗೆದುಕೊಂಡು ಹೋದರು. ಯಾರೂ ನೋಡಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ, ಯಾರೂ ಎಚ್ಚರವಾಗಲಿಲ್ಲ. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು. ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಭರ್ಜಿ ಹಾಗೂ ತಂಬಿಗೆಗಳನ್ನು ತೆಗೆದುಕೊಂಡು ಹೋದರು. ಯಾರೂ ಕಾಣಲಿಲ್ಲ; ಯಾರಿಗೂ ಗೊತ್ತಾಗಲಿಲ್ಲ, ಯಾರಿಗೂ ಎಚ್ಚರವಾಗಲಿಲ್ಲ. ಏಕೆಂದರೆ ಸರ್ವೇಶ್ವರ ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದರು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರು ಮೈಮರೆತು ನಿದ್ರೆಯಲ್ಲಿ ಮಗ್ನರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಸೌಲನ ತಲೆಗಿಂಬಿನ ಬಳಿಯಲ್ಲಿದ್ದ ಬರ್ಜಿ ತಂಬಿಗೆಗಳನ್ನು ತೆಗೆದುಕೊಂಡು ಹೋದನು. ಯಾರೂ ಕಾಣಲಿಲ್ಲ, ಯಾರಿಗೂ ಗೊತ್ತಾಗಲಿಲ್ಲ; ಯಾರೂ ಎಚ್ಚರವಾಗಲಿಲ್ಲ. ಯಾಕಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರೂ ನಿದ್ರೆಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಂತೆಯೇ, ಸೌಲನ ತಲೆಯ ಹತ್ತಿರವಿದ್ದ ಭರ್ಜಿಯನ್ನೂ ನೀರಿನ ತಂಬಿಗೆಯನ್ನೂ ದಾವೀದನು ತೆಗೆದುಕೊಂಡನು. ನಂತರ ದಾವೀದ ಮತ್ತು ಅಬೀಷೈ ಸೌಲನ ಪಾಳೆಯನ್ನು ಬಿಟ್ಟು ಹೋದರು. ಇದನ್ನು ಯಾರೂ ನೋಡಲಿಲ್ಲ. ಇದರ ಬಗ್ಗೆ ಯಾರಿಗೂ ತಿಳಿಯಲಿಲ್ಲ. ಒಬ್ಬನಾದರೂ ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ! ಸೌಲನು ಮತ್ತು ಅವನ ಸೈನಿಕರೆಲ್ಲರೂ ನಿದ್ರಿಸುತ್ತಿದ್ದರು. ಏಕೆಂದರೆ ಯೆಹೋವನು ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:12
7 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.


ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತ್ತು. ಭೀಕರವಾದ ಕಾರ್ಗತ್ತಲು ಅವನ ಮೇಲೆ ಕವಿಯಿತು.


ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.


ಆ ರಾತ್ರಿ ಅರಸನಿಗೆ ನಿದ್ರೆ ಬರಲಿಲ್ಲ. ಆದ್ದರಿಂದ ಅರಸನು ಇತಿಹಾಸ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತೆಗೆದುಕೊಂಡು ಬರಲು ಹೇಳಿದನು.


ದಾವೀದನೂ, ಅಬೀಷೈಯನೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಸೌಲನು ಕಂದಕದೊಳಗೆ ಮಲಗಿ ನಿದ್ರೆ ಮಾಡುತ್ತಿದ್ದನು. ಅವನ ಈಟಿಯು ಅವನ ತಲೆದಿಂಬಿನ ಬಳಿಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲು ಅಬ್ನೇರನೂ, ಜನರೂ ಮಲಗಿದ್ದರು.


ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ, ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಉಂಟಾಗುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು