Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:24 - ಕನ್ನಡ ಸಮಕಾಲಿಕ ಅನುವಾದ

24 ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ, ಹಾಗೆಯೇ ನನ್ನ ಪ್ರಾಣವು ಯೆಹೋವ ದೇವರ ದೃಷ್ಟಿಗೆ ದೊಡ್ಡದಾಗಿರಲಿ. ಅವರು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನಾನು ಈ ಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿದಂತೆ ಯೆಹೋವನು ನನ್ನ ಜೀವವನ್ನು ಮಾನ್ಯವಾದದ್ದೆಂದು ಎಣಿಸಿ, ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನಾನು ಈ ದಿನ ನಿಮ್ಮ ಜೀವವನ್ನು ಮಾನ್ಯವಾದದ್ದೆಂಣಿಸಿದಂತೆ ಸರ್ವೇಶ್ವರ ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲ ಇಕ್ಕಟ್ಟಿನಿಂದ ಬಿಡಿಸಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಾನು ಈಹೊತ್ತು ನಿನ್ನ ಜೀವವನ್ನು ಮಾನ್ಯವಾದದ್ದೆಂದೆಣಿಸಿದಂತೆ ಯೆಹೋವನು ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲಾ ಇಕ್ಕಟ್ಟಿನಿಂದ ಬಿಡಿಸಲಿ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಿನ್ನ ಜೀವವು ನನಗೆ ಮುಖ್ಯವೆಂಬುದನ್ನು ಈ ದಿನ ನಾನು ನಿನಗೆ ತೋರಿಸಿದೆ! ಇದೇ ರೀತಿ, ನನ್ನ ಜೀವವು ತನಗೆ ಮುಖ್ಯವೆಂಬುದನ್ನು ಯೆಹೋವನು ತೋರಿಸುತ್ತಾನೆ! ಯೆಹೋವನು ನನ್ನನ್ನು ಎಲ್ಲಾ ಕೇಡುಗಳಿಂದಲೂ ರಕ್ಷಿಸುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:24
17 ತಿಳಿವುಗಳ ಹೋಲಿಕೆ  

ಕರುಣೆಯುಳ್ಳವರು ಧನ್ಯರು, ಅವರು ಕರುಣೆ ಪಡೆಯುವರು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ವಕ್ರಬುದ್ಧಿಯುಳ್ಳ ದುಷ್ಟರ ಕೈಯಿಂದ ನಾವು ತಪ್ಪಿಸಿಕೊಳ್ಳುವಂತೆಯೂ ಪ್ರಾರ್ಥಿಸಿರಿ. ಏಕೆಂದರೆ ಎಲ್ಲರಲ್ಲಿಯೂ ವಿಶ್ವಾಸವಿಲ್ಲವಲ್ಲಾ.


ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಅವರು ನನ್ನನ್ನು ಪ್ರೀತಿಸುವ ದೇವರು, ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ.


ಏಕೆಂದರೆ ಎಲ್ಲಾ ಇಕ್ಕಟ್ಟಿನಿಂದ ನನ್ನನ್ನು ಬಿಡಿಸಿದ ದೇವರು ನೀವೇ. ನನ್ನ ವೈರಿಗಳ ಮೇಲೆ ಜಯ ಸಾಧಿಸಿದ್ದನ್ನು ನಾನು ನೋಡುವೆನು.


ದೇವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ; ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ, ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.


ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ. ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ.


ನನ್ನ ಬಲವಾಗಿರುವ ಯೆಹೋವ ದೇವರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ.


ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”


ಫಿಲಿಷ್ಟಿಯರ ಪ್ರಧಾನರು ಯುದ್ಧಕ್ಕೆ ಬರುತ್ತಿದ್ದರು. ಅವರು ಹೊರಟು ಬಂದಾಗಲೆಲ್ಲಾ ದಾವೀದನು ಸೌಲನ ಸಮಸ್ತ ಸೇನಾಪತಿಗಳಿಗಿಂತ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಆದ್ದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.


ದಾವೀದನ ಮಾತುಗಳು ಮುಗಿದ ನಂತರ, ಸೌಲನು ದಾವೀದನಿಗೆ, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಎಂದು ಗಟ್ಟಿಯಾಗಿ ಅತ್ತನು.


ಆಗ ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬನಿಗೂ, ಅವನ ಸಹೋದರ ಬಾಣನಿಗೂ ಉತ್ತರವಾಗಿ, “ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಯೆಹೋವ ದೇವರ ಜೀವದಾಣೆ,


ಅವರು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾರೆ; ಅವುಗಳಲ್ಲಿ ಒಂದಾದರೂ ಮುರಿದು ಹೋಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು