Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:25 - ಕನ್ನಡ ಸಮಕಾಲಿಕ ಅನುವಾದ

25 ಆಗ ಸೌಲನು ದಾವೀದನಿಗೆ, “ನನ್ನ ಮಗನಾದ ದಾವೀದನೇ, ದೇವರು ನಿನ್ನನ್ನು ಆಶೀರ್ವದಿಸಲಿ. ನೀನು ಮಹತ್ಕಾರ್ಯಗಳನ್ನು ಮಾಡುವೆ, ಗೆದ್ದೇ ಗೆಲ್ಲುವೆ,” ಎಂದನು. ಹಾಗೆಯೇ ದಾವೀದನು ತನ್ನ ಮಾರ್ಗವಾಗಿ ಹೋದನು. ಸೌಲನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಸೌಲನು ದಾವೀದನಿಗೆ, “ನನ್ನ ಮಗನೇ ದಾವೀದನೇ ನೀನು ಆಶೀರ್ವಾದ ಹೊಂದು. ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ” ಎಂದು ಹೇಳಿ ತನ್ನ ಊರಿಗೆ ಹೊರಟನು. ದಾವೀದನು ತನ್ನ ದಾರಿಯನ್ನು ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಸೌಲನು ದಾವೀದನಿಗೆ, “ಪುತ್ರನೇ, ದಾವೀದನೇ, ದೇವರು ನಿನ್ನನ್ನು ಹರಸಲಿ! ನೀನು ಮಹಾಕಾರ್ಯಗಳನ್ನು ಸಾಧಿಸಿ ಯಶಸ್ವಿಯಾಗು,” ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಸೌಲನು ದಾವೀದನಿಗೆ - ನನ್ನ ಮಗನೇ, ದಾವೀದನೇ, ನೀನು ಆಶೀರ್ವಾದ ಹೊಂದು; ನೀನು ಹೇಗೂ ಮಹಾಕಾರ್ಯಗಳನ್ನು ನಡಿಸಿ ಸಫಲನಾಗುವಿ ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಂತರ ಸೌಲನು ದಾವೀದನಿಗೆ, “ದೇವರು ನಿನ್ನನ್ನು ಆಶೀರ್ವದಿಸಲಿ, ನನ್ನ ಮಗನಾದ ದಾವೀದನೇ, ನೀನು ದೊಡ್ಡ ಕಾರ್ಯಗಳನ್ನು ಮಾಡುವೆ; ನೀನು ಯಶಸ್ವಿಯಾಗುವೆ” ಎಂದನು. ದಾವೀದನು ತನ್ನ ಮಾರ್ಗದಲ್ಲಿ ಹೊರಟುಹೋದನು. ಸೌಲನು ಮನೆಗೆ ಹಿಂದಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:25
10 ತಿಳಿವುಗಳ ಹೋಲಿಕೆ  

ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.


ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು.


ಯಾಕೋಬನು ದೇವದೂತನ ಸಂಗಡ ಹೋರಾಡಿ ಜಯಿಸಿದನು. ಅವನು ಅತ್ತು ಆತನ ಅನುಗ್ರಹಕ್ಕಾಗಿ ವಿಜ್ಞಾಪನೆಯನ್ನು ಸಲ್ಲಿಸಿದನು. ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು. ಅಲ್ಲಿ ಅವನು ಆತನೊಂದಿಗೆ ಮಾತನಾಡಿದನು.


ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಹಾಗೆಯೇ ದಾವೀದನು ಸೌಲನಿಗೆ ಪ್ರಮಾಣ ಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಮನುಷ್ಯರೂ ಆಶ್ರಯಗಿರಿಗೆ ಏರಿಹೋದರು.


ಈಗ ಇಗೋ, ನೀನು ನಿಶ್ಚಯವಾಗಿ ಅರಸನಾಗುವೆ ಎಂದೂ, ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರವಾಗುವುದೆಂದೂ ನಾನು ಚೆನ್ನಾಗಿ ಬಲ್ಲೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು