Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 26:9 - ಕನ್ನಡ ಸಮಕಾಲಿಕ ಅನುವಾದ

9 ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೆ ದಾವೀದನು - ಅವನನ್ನು ಕೊಲ್ಲಬೇಡ; ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಎಣಿಸಲ್ಪಡುವನೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ದಾವೀದನು ಅಬೀಷೈಗೆ, “ಸೌಲನನ್ನು ಕೊಲ್ಲಬೇಡ! ಯೆಹೋವನಿಂದ ಅಭಿಷೇಕಿಸಲ್ಪಟ್ಟ ರಾಜನಿಗೆ ಯಾರೇ ಕೇಡುಮಾಡಿದರೂ ಅವರನ್ನು ದಂಡಿಸಲೇಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 26:9
11 ತಿಳಿವುಗಳ ಹೋಲಿಕೆ  

ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು.


“ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”


ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.


ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.


ಆಗ ಅಬೀಷೈಯನು ದಾವೀದನಿಗೆ, “ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಿಂದ ನೆಲಕ್ಕೆ ಹತ್ತುವಂತೆ ತಿವಿಯಲು ಅಪ್ಪಣೆಕೊಡಬೇಕು; ಎರಡು ಸಾರಿ ಹೊಡೆಯುವುದಿಲ್ಲ,” ಎಂದನು.


ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡುಮಾಡಿದ್ದರೆ, ಕಾರಣವಿಲ್ಲದೆ ನನ್ನ ವೈರಿಯಿಂದ ಏನನ್ನಾದರೂ ಸುಲಿದುಕೊಂಡಿದ್ದರೆ,


ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.


ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು.


ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.


ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು