Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 27:12 - ಕನ್ನಡ ಸಮಕಾಲಿಕ ಅನುವಾದ

12 ಆಕೀಷನು ದಾವೀದನನ್ನು ನಂಬಿ, “ಇವನು ತನ್ನ ಜನರಾದ ಇಸ್ರಾಯೇಲರಿಗೆ ಅಸಹ್ಯವಾದನು, ಆದ್ದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿರುವನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಾವೀದನ ಹೆಸರು ಸ್ವಜನರಾದ ಇಸ್ರಾಯೇಲರಲ್ಲಿ ತನ್ನ ಹೆಸರನ್ನು ಕೆಡಿಸಿಕೊಂಡಿದ್ದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದಾವೀದನ ಹೆಸರು ಸ್ವಜನರಾದ ಇಸ್ರಾಯೇಲ್ಯರಲ್ಲಿ ಅಸಹ್ಯವಾದದರಿಂದ ಇವನು ತನ್ನ ನಿತ್ಯ ದಾಸನಾಗಿರುವನೆಂದು ಆಕೀಷನು ನಂಬಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಕೀಷನು ದಾವೀದನಲ್ಲಿ ಭರವಸೆ ಇಡತೊಡಗಿದನು. ಆಕೀಷನು ತನ್ನೊಳಗೆ, “ಈಗ ದಾವೀದನ ಸ್ವಂತ ಜನರೇ ಅವನನ್ನು ದ್ವೇಷಿಸುವರು. ಇಸ್ರೇಲರು ದಾವೀದನನ್ನು ಬಹಳವಾಗಿ ದ್ವೇಷಿಸುತ್ತಾರೆ. ಈಗ ದಾವೀದನು ಶಾಶ್ವತವಾಗಿ ನನ್ನ ಸೇವೆಮಾಡುವನು” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 27:12
6 ತಿಳಿವುಗಳ ಹೋಲಿಕೆ  

“ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ಸೌಲನು ನಾಶಮಾಡಿದ್ದರಿಂದ, ಇಸ್ರಾಯೇಲರು ಈಗ ಫಿಲಿಷ್ಟಿಯರಿಗೆ ಅಸಹ್ಯಕರ ಶತ್ರುವಾದರು,” ಎಂಬ ವರ್ತಮಾನವನ್ನು ಸಮಸ್ತ ಇಸ್ರಾಯೇಲರು ಕೇಳಿದರು. ಮತ್ತು ಗಿಲ್ಗಾಲಿಗೆ ಬಂದು ಸೌಲನನ್ನು ಸೇರಿಕೊಳ್ಳಲು ಜನರನ್ನು ಕರೆದರು.


ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.


ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.


ದಾವೀದನು ಗತ್ ಪಟ್ಟಣಕ್ಕೆ ಒಬ್ಬ ಪುರುಷನನ್ನಾದರೂ ಸ್ತ್ರೀಯನನ್ನಾದರೂ ಜೀವಂತವಾಗಿ ತರಲಿಲ್ಲ. ಏಕೆಂದರೆ ಯಾರಾದರೂ ಹೋಗಿ ರಾಜನಾದ ಆಕೀಷನಿಗೆ ಸತ್ಯವನ್ನು ತಿಳಿಸಬಹುದೆಂದು ದಾವೀದನು ಯೋಚಿಸಿದನು. ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.


ಆ ದಿವಸಗಳಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯಗಳನ್ನು ಕೂಡಿಸಿಕೊಂಡರು. ಆಗ ಆಕೀಷನು ದಾವೀದನಿಗೆ, “ನೀನೂ, ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ?” ಎಂದನು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು