Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 28:21 - ಕನ್ನಡ ಸಮಕಾಲಿಕ ಅನುವಾದ

21 ಆಗ ಆ ಸ್ತ್ರೀಯು ಸೌಲನ ಬಳಿಗೆ ಬಂದು, ಅವನು ಬಹಳ ತಲ್ಲಣಪಟ್ಟನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ, ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡವಳಾಗಿ, ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿದೆನು. ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆ ಸ್ತ್ರೀ ಸೌಲನ ಹತ್ತಿರಕ್ಕೆ ಬಂದು ಅವನು ಬಹುಭೀತನಾಗಿದ್ದಾನೆಂದು ಕಂಡು, “ನಿಮ್ಮ ದಾಸಿಯಾದ ನಾನು ನಿಮ್ಮ ಮಾತು ಕೇಳಿದೆನು; ಕೈಯಲ್ಲಿ ಜೀವ ಹಿಡಿದವಳಾಗಿ ನಿಮ್ಮ ಅಪ್ಪಣೆಯನ್ನು ನೆರವೇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆ ಸ್ತ್ರೀಯು ಸೌಲನ ಹತ್ತಿರ ಬಂದು ಅವನು ಬಹು ಭೀತನಾಗಿದ್ದಾನೆಂದು ಕಂಡು ಅವನಿಗೆ - ನಿನ್ನ ದಾಸಿಯಾದ ನಾನು ನಿನ್ನ ಮಾತು ಕೇಳಿದೆನು; ಕೈಯಲ್ಲಿ ಜೀವಹಿಡಿದವಳಾಗಿ ನಿನ್ನ ಅಪ್ಪಣೆಯನ್ನು ನೆರವೇರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 28:21
6 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ರಕ್ಷಿಸುವುದಿಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು, ಅಮ್ಮೋನಿಯರಿಗೆ ವಿರೋಧವಾಗಿ ಹೋದೆನು. ಯೆಹೋವ ದೇವರು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ನೀವು ನನ್ನ ಸಂಗಡ ಯುದ್ಧಮಾಡುವುದಕ್ಕೆ ಈ ಹೊತ್ತು ನನಗೆ ವಿರೋಧವಾಗಿ ಏಕೆ ಬಂದಿರಿ?” ಎಂದನು.


ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು; ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.


ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು.


ಆಗ ಸೌಲನು ನೆಲದ ಮೇಲೆ ಬೋರಲು ಬಿದ್ದು, ಸಮುಯೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯಪಟ್ಟನು. ಆ ದಿನವೆಲ್ಲಾ ಏನೂ ಊಟಮಾಡದೆ ಇದ್ದುದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.


ಆದ್ದರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ, ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನಗೆ ಕೊಡುವ ಆಹಾರವನ್ನು ಊಟಮಾಡು,” ಎಂದಳು.


ಆದ್ದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು, ಅವನು ತನ್ನ ಸೇವಕರನ್ನು ಕರೆದು ಅವರಿಗೆ, “ನಮ್ಮಲ್ಲಿ ಇಸ್ರಾಯೇಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವುದಿಲ್ಲವೋ?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು