Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:10 - ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ಯಜಮಾನನ ಸೇವಕರನ್ನು ಕರಕೊಂಡು, ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದ್ದರಿಂದ ನೀನೂ, ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ, ನಾಳೆ ಬೆಳಿಗ್ಗೆ ಎದ್ದು ಹೊತ್ತು ಮೂಡಿದ ಕೂಡಲೆ ಹಿಂದಿರುಗಿ ಹೋಗಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆದ್ದರಿಂದ ನೀನೂ ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ ನಾಳೆ ಬೆಳಿಗ್ಗೆ ಎದ್ದು ಹೊತ್ತುಮೂಡಿದ ಕೂಡಲೆ ಹಿಂದಿರುಗಿಹೋಗಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದದರಿಂದ ನೀನೂ ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ ನಾಳೆ ಬೆಳಿಗ್ಗೆ ಎದ್ದು ಹೊತ್ತುಮೂಡಿದ ಕೂಡಲೆ ಹಿಂದಿರುಗಿಹೋಗಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀನು ಮತ್ತು ನಿನ್ನ ಜನರು ಮುಂಜಾನೆಯಲ್ಲಿಯೇ ಹಿಂದಿರುಗಿ ಹೋಗಿ. ನಾನು ನಿನಗೆ ಕೊಟ್ಟಿರುವ ನಗರಕ್ಕೆ ಹಿಂದಿರುಗು. ಅಧಿಪತಿಗಳು ನಿನ್ನ ಬಗ್ಗೆ ಹೇಳುತ್ತಿರುವ ಕೆಟ್ಟ ಮಾತುಗಳಿಗೆ ಗಮನ ನೀಡಬೇಡ. ನೀನು ಒಬ್ಬ ಒಳ್ಳೆಯ ಮನುಷ್ಯ. ಆದ್ದರಿಂದ ಸೂರ್ಯನು ಮೇಲೇರುವಷ್ಟರಲ್ಲಿ ನೀನು ನಮ್ಮನ್ನು ಬಿಟ್ಟುಹೋಗು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:10
8 ತಿಳಿವುಗಳ ಹೋಲಿಕೆ  

ದಾವೀದನು ಸೌಲನ ಮೇಲೆ ಯುದ್ಧಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ, ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಕೊಡದೆ ಇದ್ದರು. ಏಕೆಂದರೆ ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ, “ಅವನು ನಮಗೆ ಮೋಸಮಾಡಿ, ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿದರೆ, ನಮ್ಮ ತಲೆಗಳು ಬಿದ್ದು ಹೋಗುವುವು,” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.


ಅದೇ ಕಾಲದಲ್ಲಿ ದಿನೇ ದಿನೇ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವವರೆಗೆ, ದಾವೀದನಿಗೆ ಸಹಾಯ ಕೊಡುವುದಕ್ಕೆ ಅವನ ಕಡೆಗೆ ಬರುತ್ತಿದ್ದರು.


ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.


ಹಾಗೆಯೇ ದಾವೀದನೂ, ಅವನು ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರುಗಿ ಹೋಗಲು ಮುಂಜಾನೆ ಎದ್ದರು. ಫಿಲಿಷ್ಟಿಯರು ಇಜ್ರೆಯೇಲ್ ಎಂಬ ಪಟ್ಟಣಕ್ಕೆ ಹೊರಟು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು