Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಫಿಲಿಷ್ಟಿಯರ ಅಧಿಪತಿಗಳು, “ಈ ಹಿಬ್ರಿಯರು ಏಕೆ?” ಎಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ, “ಇಸ್ರಾಯೇಲಿನ ಅರಸನಾದ ಸೌಲನ ದಾಸನಾದ ಈ ದಾವೀದನು ಇಷ್ಟು ದಿವಸಗಳೂ, ಇಷ್ಟು ವರ್ಷಗಳೂ ನನ್ನ ಸಂಗಡ ಇದ್ದಾನೆ? ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಅವನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಫಿಲಿಷ್ಟಿಯ ಪ್ರಭುಗಳು, “ಈ ಇಬ್ರಿಯರು ಯಾಕೆ?” ಎಂದು ಆಕೀಷನನ್ನು ಕೇಳಿದರು. ಅವನು ಅವರಿಗೆ, “ಇವನು ಇಸ್ರಾಯೇಲರ ಅರಸನಾದ ಸೌಲನ ಸೇವಕ ದಾವೀದನಲ್ಲವೋ, ಇವನು ಇಷ್ಟು ವರ್ಷ, ಇಷ್ಟು ದಿನಗಳಿಂದ ನನ್ನ ಬಳಿಯಲ್ಲಿದ್ದಾನೆ. ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿನ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಫಿಲಿಷ್ಟಿಯ ರಾಜರು, “ಈ ಹಿಬ್ರಿಯರು ಏಕೆ?” ಎಂದು ಆಕೀಷನನ್ನು ಕೇಳಿದರು. “ಈತ, ಇಸ್ರಯೇಲರ ಅರಸನಾದ ಸೌಲನ ಸೇವಕನಾದ ದಾವೀದನಲ್ಲವೇ? ಇವನು ಇಷ್ಟು ವರ್ಷ, ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲೇ ಇದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ,” ಎಂದು ಆಕೀಷನು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಫಿಲಿಷ್ಟಿಯಪ್ರಭುಗಳು - ಈ ಇಬ್ರಿಯರು ಯಾಕೆ ಎಂದು ಆಕೀಷನನ್ನು ಕೇಳಲು ಅವನು ಅವರಿಗೆ - ಇವನು ಇಸ್ರಾಯೇಲ್ಯರ ಅರಸನಾದ ಸೌಲನ ಸೇವಕ ದಾವೀದನಲ್ಲವೋ? ಇವನು ಇಷ್ಟು ವರುಷ ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲಿದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಫಿಲಿಷ್ಟಿಯರ ಅಧಿಪತಿಗಳು, “ಈ ಇಬ್ರಿಯರು ಇಲ್ಲಿ ಮಾಡುತ್ತಿರುವುದೇನು?” ಎಂದು ಆಕೀಷನನ್ನು ಕೇಳಿದರು. ಆಕೀಷನು ಫಿಲಿಷ್ಟಿಯರ ಸೇನಾಧಿಪತಿಗಳಿಗೆ, “ಇವನು ದಾವೀದ. ದಾವೀದನು ಸೌಲನ ಅಧಿಕಾರಿಗಳಲ್ಲಿ ಒಬ್ಬನು. ದಾವೀದನು ಬಹಳ ಕಾಲದಿಂದ ನನ್ನೊಡನೆ ಇದ್ದಾನೆ. ದಾವೀದನು ಸೌಲನನ್ನು ತೊರೆದು ನನ್ನ ಬಳಿಗೆ ಬಂದಾಗಿನಿಂದ ನಾನು ಅವನಲ್ಲಿ ಯಾವ ತಪ್ಪುನ್ನೂ ಗುರುತಿಸಿಲ್ಲ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:3
13 ತಿಳಿವುಗಳ ಹೋಲಿಕೆ  

ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪು ಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.


ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ನಾಲ್ಕು ತಿಂಗಳು ವಾಸಿಸಿದ್ದನು.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.


ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.


“ನೀನು ದಯಮಾಡಿ ನಿನ್ನ ದಾಸಿಯ ತಪ್ಪನ್ನು ಮನ್ನಿಸಬೇಕು. ಏಕೆಂದರೆ ನನ್ನ ಒಡೆಯನು ಯೆಹೋವ ದೇವರ ಯುದ್ಧಗಳನ್ನು ನಡೆಸುತ್ತಾನೆ. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನ ಕಾಣದಿರಲಿ. ಯೆಹೋವ ದೇವರು ನಿಶ್ಚಯವಾಗಿ ನನ್ನ ಒಡೆಯನಾದ ನಿನಗೆ ಶಾಶ್ವತ ರಾಜ್ಯವನ್ನು ಸ್ಥಿರಪಡಿಸುವರು.


ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.


ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ನಿಜವಾಗಿಯೂ ಯೆಹೋವ ದೇವರಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವುದು ನನ್ನ ದೃಷ್ಟಿಗೆ ಒಳ್ಳೆಯದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡಿಲ್ಲ. ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ.


ದಾವೀದನು ಸೌಲನ ಮೇಲೆ ಯುದ್ಧಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ, ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಕೊಡದೆ ಇದ್ದರು. ಏಕೆಂದರೆ ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ, “ಅವನು ನಮಗೆ ಮೋಸಮಾಡಿ, ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿದರೆ, ನಮ್ಮ ತಲೆಗಳು ಬಿದ್ದು ಹೋಗುವುವು,” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.


ದಾವೀದನು ಹಿಂದಿರುಗಿ ಚಿಕ್ಲಗಿಗೆ ಹಿಂದಿರುಗುತ್ತಿದ್ದಾಗ ಅವನೊಂದಿಗೆ ಮನಸ್ಸೆ ಗೋತ್ರದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು, ಚಿಲ್ಲೆತೈ ಎಂಬವರು ಬಂದು ಸೇರಿಕೊಂಡರು.


ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.


ಅವರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿದಾಗ, “ಹಿಬ್ರಿಯರ ಪಾಳೆಯದ ಈ ಮಹಾ ಆರ್ಭಟವೇನು?” ಎಂದು ವಿಚಾರಿಸಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳಿದುಕೊಂಡರು.


ಹಾಗೆಯೇ ಅವರಿಬ್ಬರೂ ತಾವು ಫಿಲಿಷ್ಟಿಯರ ಠಾಣ್ಯದವರೆಗೂ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರು, “ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಹಿಬ್ರಿಯರು ಹೊರಟು ಬರುತ್ತಾರೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು