Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 29:8 - ಕನ್ನಡ ಸಮಕಾಲಿಕ ಅನುವಾದ

8 ದಾವೀದನು ಆಕೀಷನಿಗೆ, “ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧಮಾಡಲು ಹೋಗದ ಹಾಗೆ ನಾನೇನು ಮಾಡಿದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದವರೆಗೂ ನನ್ನಲ್ಲಿ ಏನು ಕಂಡುಕೊಂಡಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಾವೀದನು ಆಕೀಷನಿಗೆ, “ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದ ದಿನದಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ, ಅವನ ಶತ್ರುಗಳೊಡನೆ ನಾನೇಕೆ ಯುದ್ಧ ಮಾಡಬಾರದು?” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಾವೀದನು ಆಕೀಷನಿಗೆ, “ನಾನೇನು ಮಾಡಿದೆ? ನಿಮ್ಮ ಸೇವಕನಾದ ನಾನು ನಿಮ್ಮ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿರಿ? ರಾಜರಾದ ನನ್ನ ಒಡೆಯರ ಜೊತೆಯಲ್ಲಿ ಹೋಗಿ ಅವರ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು? ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನೇನು ಮಾಡಿದೆನು? ನಿನ್ನ ದಾಸನಾದ ನಾನು ನಿನ್ನ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿ? ಅರಸನಾದ ನನ್ನ ಒಡೆಯನ ಜೊತೆಯಲ್ಲಿ ಹೋಗಿ ಅವನ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾವೀದನು, “ನಾನು ಮಾಡಿರುವ ತಪ್ಪಾದರೂ ಏನು? ನಾನು ನಿನ್ನ ಹತ್ತಿರಕ್ಕೆ ಬಂದಾಗಿನಿಂದ ಈಗಿನವರೆಗೆ ನನ್ನಲ್ಲಿ ನೀನು ಗುರುತಿಸಿರುವ ದುಷ್ಟತನವಾದರೂ ಏನು? ರಾಜನಾದ ನನ್ನ ಒಡೆಯನ ಶತ್ರುಗಳ ವಿರುದ್ಧ ಹೋರಾಡಲು ನನ್ನನ್ನು ಬಿಡುವುದಿಲ್ಲವೇಕೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 29:8
10 ತಿಳಿವುಗಳ ಹೋಲಿಕೆ  

ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ದಾವೀದನು ಆಕೀಷನಿಗೆ, “ನಿಶ್ಚಯವಾಗಿ ನಿನ್ನ ದಾಸನು ಮಾಡುವುದನ್ನು ನೀನೇ ತಿಳಿದುಕೊಳ್ಳುವಿ,” ಎಂದನು. ಆಕೀಷನು ದಾವೀದನಿಗೆ, “ಎಂದೆಂದಿಗೂ ನಾನು ನಿನ್ನನ್ನು ಕಾವಲುಗಾರನಾಗಿ ಮಾಡುವೆನು,” ಎಂದನು.


“ನನ್ನ ಒಡೆಯನು ತನ್ನ ಸೇವಕನನ್ನು ಹೀಗೆ ಹಿಂದಟ್ಟುವುದೇನು? ನಾನೇನು ಮಾಡಿದೆನು?


ಆದ್ದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು. ಏಕೆಂದರೆ ಯೆಹೋವ ದೇವರ ಒಡಂಬಡಿಕೆಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀಯಲ್ಲಾ. ಆದರೂ ನನ್ನಲ್ಲಿ ಅಕ್ರಮವಿದ್ದರೆ, ನೀನೇ ನನ್ನನ್ನು ಕೊಂದುಹಾಕು. ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವುದು ಏಕೆ?” ಎಂದನು.


ಅದಕ್ಕೆ ದಾವೀದನು, “ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೇ?” ಎಂದನು.


ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.


ಆಗ ಆಕೀಷನು, “ಈ ಹೊತ್ತು ಎಲ್ಲಿ ಸುಲಿದುಕೊಂಡಿರಿ?” ಎಂದಾಗ ದಾವೀದನು, “ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ, ಯೆರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ, ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು,” ಎಂದನು.


ಆದ್ದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಗೆ ಇಲ್ಲದ್ದರಿಂದ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು