Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:13 - ಕನ್ನಡ ಸಮಕಾಲಿಕ ಅನುವಾದ

13 ನಾನು ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯತೀರಿಸುವೆನು, ಎಂದು ಹೇಳಿದ್ದೆನು. ಏಕೆಂದರೆ ತನ್ನ ಪುತ್ರರು ದೇವರ ನಿಂದನೆ ಮಾಡಿದಾಗ, ಅವರನ್ನು ಹತೋಟಿಗೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನ ಮಕ್ಕಳು ಶಾಪಗ್ರಸ್ತರಾದರೆಂದು ಅವನಿಗೆ ತಿಳಿದು ಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿಮಿತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತನ್ನ ಮಕ್ಕಳು ದೇವದೂಷಕರು ಎಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ತಿದ್ದಲಿಲ್ಲ. ಈ ಪಾಪದ ನಿಮಿತ್ತ ಅವನ ಕುಟುಂಬವನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತನ್ನ ಮಕ್ಕಳು ದೇವದೂಷಕರೆಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿವಿುತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಏಲಿಯ ಕುಟುಂಬವನ್ನು ನಿತ್ಯದಂಡನೆಗೆ ಗುರಿಪಡಿಸುತ್ತೇನೆಂದು ನಾನು ಏಲಿಗೆ ಹೇಳಿರುವೆನು. ಏಲಿಯ ಮಕ್ಕಳು ನನಗೆ ವಿರೋಧವಾಗಿ ಮಾತಾಡಿದ್ದರಿಂದ ಮತ್ತು ಕೆಟ್ಟಕಾರ್ಯಗಳನ್ನು ಮಾಡಿದ್ದರಿಂದ ನಾನು ಇದನ್ನು ಮಾಡುತ್ತೇನೆ. ಅಲ್ಲದೆ ಅವರನ್ನು ಹತೋಟಿಯಲ್ಲಿಡಲು ಏಲಿಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:13
17 ತಿಳಿವುಗಳ ಹೋಲಿಕೆ  

“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಮರಣಕ್ಕೆ ನೀನು ಕಾರಣನಾಗಬೇಡ.


ಆದರೆ ಏಲಿಯ ಪುತ್ರರು ಯೆಹೋವ ದೇವರನ್ನು ಗೌರವಿಸದೆ ದುಷ್ಟರಾಗಿದ್ದರು.


ಈ ಯುವಕರ ಪಾಪವು ಯೆಹೋವ ದೇವರ ದೃಷ್ಟಿಯಲ್ಲಿ ಅಧಿಕವಾಗಿತ್ತು. ಏಕೆಂದರೆ ಅವರು ಯೆಹೋವ ದೇವರ ನೈವೇದ್ಯವನ್ನು ತುಚ್ಛವಾಗಿ ಕಂಡರು.


“ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ.


ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.


ಅವನ ತಂದೆಯು ಎಂದಾದರೂ, “ನೀನು ಹೀಗೆ ಏಕೆ ಮಾಡಿದೆ?” ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಅವನು ಬಹು ಒಳ್ಳೆಯ ರೂಪವಂತನಾಗಿದ್ದನು. ಅಬ್ಷಾಲೋಮನ ತರುವಾಯ ಅವನ ತಾಯಿ ಅವನನ್ನು ಹೆತ್ತಳು.


ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಆದರೆ ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.


ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.


ಜನಾಂಗಗಳು ಎಚ್ಚೆತ್ತು ಯೆಹೋಷಾಫಾಟನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ಜನಾಂಗಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.


ನೀನು ಸಹ ಅನೇಕ ವೇಳೆ ಇತರರನ್ನು ಶಪಿಸಿದ್ದೀ, ಇದು ನಿನ್ನ ಹೃದಯಕ್ಕೆ ತಿಳಿದಿದೆ.


ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.


ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು.


ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸೇವೆ ಮಾಡುವುದಕ್ಕೆ ನಿಂತ ಯಾಜಕನ ಮಾತನ್ನಾದರೂ, ನ್ಯಾಯಾಧಿಪತಿಯ ಮಾತನ್ನಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವುದಾದರೆ, ಆ ಮನುಷ್ಯನು ಸಾಯಲೇಬೇಕು. ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.


ಒಬ್ಬ ಮನುಷ್ಯನಿಗೆ ಮೊಂಡನೂ, ತಿರುಗಿ ಬೀಳುವವನೂ ಆದ ಮಗನಿದ್ದರೆ, ಅವನು ತಂದೆತಾಯಿಯ ಮಾತನ್ನೂ ಕೇಳದೆ, ಅವರು ಅವನನ್ನು ಶಿಸ್ತುಪಡಿಸಲು ಹೇಳುವ ಮಾತನ್ನೂ ಕೇಳದೆ ಹೋದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು