Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 3:9 - ಕನ್ನಡ ಸಮಕಾಲಿಕ ಅನುವಾದ

9 ಏಲಿಯು ಸಮುಯೇಲನಿಗೆ, “ನೀನು ಹೋಗಿ ಮಲಗು; ಅವರು ನಿನ್ನನ್ನು ಕರೆದರೆ, ಆಗ ನೀನು, ‘ಯೆಹೋವ ದೇವರೇ, ಮಾತನಾಡಿ, ನಿಮ್ಮ ದಾಸನು ಕೇಳುತ್ತಾನೆ,’ ಎಂದು ಹೇಳು,” ಎಂದನು. ಹಾಗೆಯೇ ಸಮುಯೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪುನಃ ಆತನು ನಿನ್ನನ್ನು ಕರೆದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕೇಳಿಸಿಕೊಳ್ಳುತ್ತಿದ್ದಾನೆ” ಎಂದು ಹೇಳು ಅಂದನು. ಸಮುವೇಲನು ತಿರುಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ಸಮುವೇಲನಿಗೆ, “ಹೋಗಿ ಮಲಗಿಕೋ; ಮತ್ತೆ ಅವರು ನಿನ್ನನ್ನು ಕರೆದರೆ, ‘ಸರ್ವೇಶ್ವರಾ, ಅಪ್ಪಣೆಯಾಗಲಿ; ತಮ್ಮ ದಾಸ ಕಾದಿದ್ದಾನೆ,’ ಎಂದು ಹೇಳು,” ಎಂದನು. ಸಮುವೇಲನು ಹಿಂದಿರುಗಿ ಹೋಗಿ ತನ್ನ ಸ್ಥಳದಲ್ಲೇ ಮಲಗಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಿರಿಗಿ ಶಬ್ದವಾದರೆ ಯೆಹೋವನೇ, ಅಪ್ಪಣೆಯಾಗಲಿ, ನಿನ್ನ ದಾಸನು ಕಾದಿದ್ದಾನೆ ಎಂದು ಹೇಳು ಅಂದನು. ಸಮುವೇಲನು ತಿರಿಗಿ ಹೋಗಿ ತನ್ನ ಸ್ಥಳದಲ್ಲಿ ಮಲಗಿಕೊಳ್ಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಏಲಿಯು ಸಮುವೇಲನಿಗೆ, “ಹೋಗಿ ಮಲಗಿಕೋ. ನಿನ್ನನ್ನು ಮತ್ತೆ ಕರೆದರೆ, ‘ಅಪ್ಪಣೆಯಾಗಲಿ, ಯೆಹೋವನೇ ನಾನು ನಿನ್ನ ಸೇವಕ, ಕೇಳಿಸಿಕೊಳ್ಳುತ್ತಿದ್ದೇನೆ’ ಎಂದು ಉತ್ತರಿಸು” ಎಂಬುದಾಗಿ ಹೇಳಿದನು. ಸಮುವೇಲನು ತನ್ನ ಸ್ಥಳದಲ್ಲಿ ಮಲಗಲು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 3:9
9 ತಿಳಿವುಗಳ ಹೋಲಿಕೆ  

ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮೊಂದಿಗೆ ನೇರವಾಗಿ ಮಾತನಾಡಲು ಬಿಡಬೇಡಿ,” ಎಂದು ವಿನಂತಿಸಿಕೊಂಡರು.


ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.


ಯೆಹೋವ ದೇವರು ಏನು ಹೇಳುತ್ತಾರೋ ಅದನ್ನು ನಾನು ಕೇಳುವೆನು. ದೇವರು ತಮ್ಮ ಜನರಿಗೂ ತಮ್ಮ ಭಕ್ತರಿಗೂ ಸಮಾಧಾನವನ್ನು ವಾಗ್ದಾನಮಾಡುವರು. ಆದರೆ ಅವರ ಜನರು ಇನ್ನು ಬುದ್ಧಿಹೀನತೆಗೆ ತಿರುಗಿಕೊಳ್ಳದೆ ಇರಲಿ.


ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.


“ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.


ಯೆಹೋವ ದೇವರು ಮತ್ತೆ ಮೂರನೆಯ ಸಾರಿ, “ಸಮುಯೇಲನೇ,” ಎಂದು ಕರೆದರು. ಅವನು ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಇದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ,” ಎಂದನು. ಆಗ ಏಲಿಯು, ಯೆಹೋವ ದೇವರು ಹುಡುಗನನ್ನು ಕರೆದರೆಂದು ಗ್ರಹಿಸಿಕೊಂಡನು.


ಆಗ ಯೆಹೋವ ದೇವರು ಬಂದು ನಿಂತು ಮೊದಲಿನ ಹಾಗೆಯೇ, “ಸಮುಯೇಲನೇ, ಸಮುಯೇಲನೇ,” ಎಂದು ಕರೆದರು. ಅದಕ್ಕೆ ಸಮುಯೇಲನು, “ಯೆಹೋವ ದೇವರೇ ಮಾತನಾಡಿ; ನಿಮ್ಮ ದಾಸನು ಕೇಳುತ್ತಾನೆ,” ಎಂದನು.


ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು.


ನಿಶ್ಚಯವಾಗಿ ಮಹಿಮೆಯು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ದೇವರಿಗೆ ಭಯಪಡುವವರಿಗೆ ದೇವರ ರಕ್ಷಣೆಯು ಸಮೀಪವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು