Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:20 - ಕನ್ನಡ ಸಮಕಾಲಿಕ ಅನುವಾದ

20 ಇದಲ್ಲದೆ ದಾವೀದನು ಶತ್ರುಗಳ ಸಮಸ್ತ ದನಕುರಿಗಳ ಮಂದೆಗಳನ್ನು ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ಪಶುಗಳ ಮುಂದಾಗಿ ಹೊಡೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಇದಲ್ಲದೆ, ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ,” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಸಮೇತ ಹೊಡೆದುಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನು ತೆಗೆದುಕೊಂಡನು. ಅವನ ಜನರು - ಇವು ದಾವೀದನ ಕೊಳ್ಳೆ ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡಕೊಂಡು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದಾವೀದನು ಎಲ್ಲ ಕುರಿಗಳನ್ನು ಮತ್ತು ದನಗಳನ್ನು ತೆಗೆದುಕೊಂಡನು. ಈ ಪಶುಗಳು ಮುಂದೆ ಹೋಗುವಂತೆ ದಾವೀದನ ಜನರು ಮಾಡಿದರು. ದಾವೀದನ ಜನರು, “ಅವು ದಾವೀದನ ಕೊಡುಗೆಗಳು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:20
7 ತಿಳಿವುಗಳ ಹೋಲಿಕೆ  

ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.


ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.


ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು.


ಪಶುಗಳಿದ್ದ ಡೇರೆಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂಸಲೇಮಿಗೆ ತಿರುಗಿ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು