Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:22 - ಕನ್ನಡ ಸಮಕಾಲಿಕ ಅನುವಾದ

22 ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ, ನಾವು ತೆಗೆದುಕೊಂಡು ಬಂದಿರುವ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಹೆಂಡತಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಮಡದಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮುರ್ಖರೂ ಆದ ಕೆಲವು ಮಂದಿ - ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವದಿಲ್ಲ. ತಮ್ಮತಮ್ಮ ಹೆಂಡರುಮಕ್ಕಳನ್ನು ಕರಕೊಂಡು ಹೋಗಿಬಿಡಲಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ದಾವೀದನ ಜೊತೆಯಲ್ಲಿ ಹೋಗಿದ್ದ ಜನರ ಗುಂಪಿನಲ್ಲಿ ಕೆಟ್ಟ ಜನರೂ ಕಿಡಿಗೇಡಿಗಳೂ ಇದ್ದರು. ಆ ಕೀಡಿಗೇಡಿಗಳು, “ಈ ಇನ್ನೂರು ಜನರು ನಮ್ಮೊಡನೆ ಬರಲಿಲ್ಲ. ಆದ್ದರಿಂದ ನಾವು ವಶಪಡಿಸಿಕೊಂಡ ವಸ್ತುಗಳಲ್ಲಿ ಯಾವುದನ್ನೂ ಇವರಿಗೆ ಕೊಡುವುದಿಲ್ಲ. ಇವರು ತಮ್ಮ ಹೆಂಡತಿಯರನ್ನು ಮತ್ತು ಮಕ್ಕಳನ್ನು ಮಾತ್ರ ತೆಗೆದುಕೊಳ್ಳಬಹುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:22
10 ತಿಳಿವುಗಳ ಹೋಲಿಕೆ  

ಆದ್ದರಿಂದ, ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಬಯಸುತ್ತೀರೋ, ಅದರಂತೆಯೇ ನೀವು ಅವರಿಗೆ ಮಾಡಿರಿ; ಇದೇ ನಿಯಮ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶವು.


ದುಷ್ಟಜನರು ಎದ್ದು ತಮ್ಮ ಪಟ್ಟಣದಲ್ಲಿರುವ ಜನರನ್ನು, “ನೀವು ತಿಳಿಯದಿರುವ ಇತರ ದೇವರುಗಳನ್ನು ಪೂಜಿಸೋಣ ಬನ್ನಿರಿ,” ಎಂದು ಹೇಳಿ ದುರ್ಮಾಗಕ್ಕೆ ಎಳೆದಿದ್ದಾರೆ ಎಂಬ ಸುದ್ದಿ ನಿಮಗೆ ತಿಳಿಸಿದರೆ,


ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.


‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು.


ನನ್ನ ಒಡೆಯನೇ, ದಯಮಾಡಿ ದುಷ್ಟನಾದ ನಾಬಾಲನ ಮೇಲೆ ಲಕ್ಷ್ಯವಿಡಬೇಡ. ಏಕೆಂದರೆ ಅವನ ಹೆಸರು ಹೇಗೋ, ಹಾಗೆಯೇ ಅವನು. ಅವನು ನಾಬಾಲನೆಂಬ ಹೆಸರುಳ್ಳವನು. ಬುದ್ಧಿಹೀನತೆ ಅವನಲ್ಲಿ ಇದೆ. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಸೇವಕರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.


ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು.


ಇದಲ್ಲದೆ ಶ್ರಮಪಟ್ಟವರೂ, ಸಾಲಗಾರರೂ, ಅಸಂತುಷ್ಟರೂ ಅವನ ಸಂಗಡ ಕೂಡಿಕೊಂಡರು. ಆಗ ದಾವೀದನು ಅವರಿಗೆ ಅಧಿಪತಿಯಾದನು. ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.


ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು.


ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು.


ಅದಕ್ಕೆ ದಾವೀದನು, “ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟ ಯೆಹೋವ ದೇವರು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು