Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:23 - ಕನ್ನಡ ಸಮಕಾಲಿಕ ಅನುವಾದ

23 ಅದಕ್ಕೆ ದಾವೀದನು, “ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟ ಯೆಹೋವ ದೇವರು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆಗ ದಾವೀದನು ಅವರಿಗೆ, “ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ದಾವೀದನು ಅವರಿಗೆ, “ಸಹೋದರರೇ, ಸರ್ವೇಶ್ವರ ನಮ್ಮನ್ನು ಕಾಪಾಡಿ, ನಮಗೆ ವಿರುದ್ಧ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ, ನಮಗೆ ಇಷ್ಟನ್ನೆಲ್ಲಾ ಅನುಗ್ರಹಿಸಿದ ಮೇಲೆ ನೀವು ಹೀಗೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ದಾವೀದನು ಅವರಿಗೆ - ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದಾವೀದನು, “ನನ್ನ ಸಹೋದರರೇ, ಆ ರೀತಿ ಮಾಡಬೇಡಿ! ಯೆಹೋವನು ನಮಗೆ ದಯಪಾಲಿಸಿರುವುದನ್ನು ಕುರಿತು ಯೋಚಿಸಿ! ನಮ್ಮ ಮೇಲೆ ಧಾಳಿಮಾಡಿದ ಶತ್ರುಗಳನ್ನು ಸೋಲಿಸಲು ಯೆಹೋವನು ನಮ್ಮನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:23
16 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.


“ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು.


ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,


ಯೆಹೋವ ದೇವರು ಬಡತನವನ್ನು, ಐಶ್ವರ್ಯವನ್ನು ಕೊಡುವವರೂ, ತಗ್ಗಿಸುವವರೂ, ಉನ್ನತ ಮಾಡುವವರೂ ಆಗಿದ್ದಾರೆ.


ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ, ಅವರಿಗೆ, “ಹಾಗೆ ಮಾಡಬೇಡಿರಿ. ನನ್ನ ಸಹೋದರರೇ, ದಯಮಾಡಿ ಕೆಟ್ಟತನ ಮಾಡಬೇಡಿರಿ. ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥ ಬುದ್ಧಿಹೀನತೆಯನ್ನು ಮಾಡಬೇಡಿರಿ.


ನೀವು ತಿಂದು ತೃಪ್ತಿ ಹೊಂದಿದಾಗ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಒಳ್ಳೆಯ ದೇಶದಲ್ಲಿ ಅವರನ್ನು ಸ್ತುತಿಸಬೇಕು.


“ನನ್ನ ಸಹೋದರರೇ, ಈ ದುಷ್ಟತನವನ್ನು ಮಾಡಬೇಡಿರಿ.


ಆದ್ದರಿಂದ ತಮ್ಮ ಬಲೆಗೆ ಬಲಿ ಅರ್ಪಿಸಿ, ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ. ಏಕೆಂದರೆ ಇವುಗಳಿಂದ ಅವರ ಭೋಜನ ಪುಷ್ಟಿಯಾಗಿಯೂ, ಅವರ ಆಹಾರ ರುಚಿಯುಳ್ಳದ್ದಾಗಿಯೂ ಇದೆ.


ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.


ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು.


ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು.


ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು