1 ಸಮುಯೇಲ 30:6 - ಕನ್ನಡ ಸಮಕಾಲಿಕ ಅನುವಾದ6 ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸೈನ್ಯದಲ್ಲಿದ್ದ ಎಲ್ಲರೂ ದುಃಖತಪ್ತರಾಗಿದ್ದರು ಮತ್ತು ಕೋಪಗೊಂಡಿದ್ದರು; ಯಾಕೆಂದರೆ ಅವರ ಗಂಡು ಮತ್ತು ಹೆಣ್ಣುಮಕ್ಕಳೆಲ್ಲ ಸೆರೆಯಾಳುಗಳಾಗಿ ಒಯ್ಯಲ್ಪಟ್ಟಿದರು. ದಾವೀದನನ್ನು ಕಲ್ಲುಗಳಿಂದ ಕೊಲ್ಲಬೇಕೆಂದು ಅವರು ಮಾತಾಡಿಕೊಳ್ಳುತ್ತಿದ್ದರು. ದಾವೀದನು ಇದರಿಂದ ತಳಮಳಗೊಂಡರೂ ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡನು. ಅಧ್ಯಾಯವನ್ನು ನೋಡಿ |
ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.