Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 30:8 - ಕನ್ನಡ ಸಮಕಾಲಿಕ ಅನುವಾದ

8 ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಂತರ ದಾವೀದನು ಯೆಹೋವನಲ್ಲಿ, “ನಮ್ಮ ಕುಟುಂಬಗಳನ್ನು ಅಪಹರಿಸಿದ ಜನರನ್ನು ನಾನು ಅಟ್ಟಿಸಿಕೊಂಡು ಹೋಗಬೇಕೇ? ನಾನು ಅವರನ್ನು ಸೆರೆಹಿಡಿಯುವೆನೇ?” ಎಂದು ಪ್ರಾರ್ಥಿಸಿದನು. ಯೆಹೋವನು, “ಅವರನ್ನು ಅಟ್ಟಿಸಿಕೊಂಡು ಹೋಗು. ಅವರನ್ನು ನೀನು ಸೆರೆಹಿಡಿಯಬಹುದು. ನಿಮ್ಮ ಕುಟುಂಬಗಳನ್ನು ನೀವು ರಕ್ಷಿಸಬಹುದು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 30:8
21 ತಿಳಿವುಗಳ ಹೋಲಿಕೆ  

ಅಮಾಲೇಕ್ಯರು ತೆಗೆದುಕೊಂಡು ಹೋದದ್ದನ್ನೆಲ್ಲವನ್ನೂ ತನ್ನ ಇಬ್ಬರು ಹೆಂಡತಿಯರನ್ನೂ ದಾವೀದನು ಬಿಡಿಸಿಕೊಂಡನು.


ಆದ್ದರಿಂದ ದಾವೀದನು, “ನಾನು ಈ ಫಿಲಿಷ್ಟಿಯರನ್ನು ಹೊಡೆಯಲು ಹೋಗಲೋ?” ಎಂದು ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು, “ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ನಗರವನ್ನು ರಕ್ಷಿಸು,” ಎಂದರು.


ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ಖಂಡಿತವಾಗಿ ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.


ಆದ್ದರಿಂದ ದಾವೀದನು ಇದರ ಬಗ್ಗೆ ಯೆಹೋವ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಮುಂದೆ ಹೋಗದೆ, ಅವರ ಹಿಂದಿನಿಂದ ಸುತ್ತಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.


ದಾವೀದನು ತಿರುಗಿ ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು ಉತ್ತರವಾಗಿ, “ನೀನೆದ್ದು ಕೆಯೀಲಾ ನಗರಕ್ಕೆ ಹೋಗು; ಏಕೆಂದರೆ ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು.


ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.


ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.


ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು.


ಆರೋನನ ಮೊಮ್ಮಗನೂ, ಎಲಿಯಾಜರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದದರಿಂದಲೂ, ಇಸ್ರಾಯೇಲರು, “ನಮ್ಮ ಸಹೋದರರಾದ ಬೆನ್ಯಾಮೀನ್ಯರಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವುದಕ್ಕೆ ಹೋಗಬೇಕೋ ಬೇಡವೋ?” ಎಂದು ದೇವರನ್ನು ಕೇಳಿಕೊಂಡರು. ಯೆಹೋವ ದೇವರು, “ಹೋಗಿರಿ, ಏಕೆಂದರೆ ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.


ಅದಕ್ಕೆ ಸೌಲನು, “ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀವು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ದೇವರ ಆಲೋಚನೆಯನ್ನು ಕೇಳಿದನು. ಆದರೆ ಅವರು ಅವನಿಗೆ ಆ ದಿವಸದಲ್ಲಿ ಉತ್ತರ ಕೊಡದೆ ಹೋದರು.


ಆಸ್ತಿಯನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಬಂಧುವಾದ ಲೋಟನನ್ನೂ, ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತೆಗೆದುಕೊಂಡು ಬಂದನು.


ಶತ್ರುವು ಹೆಮ್ಮೆಯಿಂದ ಹೀಗೆ ಮಾತನಾಡಿಕೊಳ್ಳುತ್ತಿದ್ದರು, ‘ನಾನು ಹಿಂದಟ್ಟುವೆನು, ಅವರನ್ನು ಹಿಡಿಯುವೆನು, ನಾನು ಅವರ ಕೊಳ್ಳೆಯನ್ನು ಹಂಚುವೆನು; ನನ್ನ ಆಶೆಗಳು ಅವರಿಂದ ತೃಪ್ತಿ ಹೊಂದುವುವು; ನಾನು ನನ್ನ ಖಡ್ಗವನ್ನು ಹಿರಿಯುವೆನು; ನನ್ನ ಕೈ ಅವರನ್ನು ಸಂಹಾರ ಮಾಡುವುದು.’


ಅವರು ತೆಗೆದುಕೊಂಡು ಹೋದ ಕಿರಿಯರಲ್ಲಾದರೂ, ಹಿರಿಯರಲ್ಲಾದರೂ, ಪುತ್ರರಲ್ಲಾದರೂ, ಪುತ್ರಿಯರಲ್ಲಾದರೂ, ಕೊಳ್ಳೆಯಾದ ಯಾವ ವಸ್ತುಗಳಲ್ಲಾದರೂ ಒಂದೂ ಕಡಿಮೆ ಇಲ್ಲದ ಹಾಗೆ, ದಾವೀದನು ಎಲ್ಲವನ್ನು ತಿರುಗಿ ತೆಗೆದುಕೊಂಡು ಬಂದನು.


ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ; ಅವನೂ, ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ, ಹಿಂದಟ್ಟುವವರಾಗಿಯೂ ಇದ್ದರು.


ಆದ್ದರಿಂದ ಅವರು, “ಅವನು ಇನ್ನು ಇಲ್ಲಿ ಬರುವನೋ?” ಎಂದು ಯೆಹೋವ ದೇವರನ್ನು ವಿಚಾರಿಸಿದರು. ಯೆಹೋವ ದೇವರು, “ಇಗೋ, ಅವನು ಸಲಕರಣೆಗಳಲ್ಲಿ ಅಡಗಿಕೊಂಡಿದ್ದಾನೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು