Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 5:6 - ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನ ಹಸ್ತ ಅಷ್ಡೋದಿನವರಿಗೆ ಬಾಧಕವಾಗಿತ್ತು. ಸರ್ವೇಶ್ವರ ಗಡ್ಡೆರೋಗವನ್ನು ಬರಮಾಡಿ ಅವರ ನಗರವನ್ನೂ ಅದರ ಗ್ರಾಮಗಳನ್ನೂ ಹಾಳುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ ಅದರ ಗ್ರಾಮಗಳಲ್ಲಿಯೂ ಗಡ್ಡೆರೋಗವನ್ನು ಬರಮಾಡಿ ಅವುಗಳನ್ನು ಹಾಳುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಷ್ಡೋದಿನ ಮತ್ತು ಅವರ ನೆರೆಹೊರೆಯ ಜನರ ಜೀವನವನ್ನು ಯೆಹೋವನು ಕಠಿಣಗೊಳಿಸಿದನು. ಯೆಹೋವನು ಅವರಿಗೆ ಹೆಚ್ಚು ತೊಂದರೆ ಕೊಟ್ಟನು. ಆತನು ಅವರಿಗೆ ಗಡ್ಡೆರೋಗವನ್ನು ಬರಮಾಡಿದನು. ಅಲ್ಲದೆ ಯೆಹೋವನು ಅವರ ಬಳಿಗೆ ಇಲಿಗಳನ್ನು ಕಳುಹಿಸಿದನು. ಆ ಇಲಿಗಳು ಅವರ ಹಡಗುಗಳಲ್ಲೆಲ್ಲಾ ಮತ್ತು ಭೂಮಿಯಲ್ಲೆಲ್ಲಾ ಹರಡಿಕೊಂಡವು. ನಗರದ ಜನರು ಬಹು ಭಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 5:6
13 ತಿಳಿವುಗಳ ಹೋಲಿಕೆ  

ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.


ಇಗೋ ಕರ್ತದೇವರ ಹಸ್ತ ನಿನಗೆ ವಿರೋಧವಾಗಿದೆ. ಈಗ ನೀನು ಕುರುಡನಾಗಿ, ಸ್ವಲ್ಪ ಕಾಲ ಸೂರ್ಯನ ಬೆಳಕನ್ನು ಕಾಣದೇ ಹೋಗುವೆ,” ಎಂದನು. ತಕ್ಷಣವೇ ಅವನ ಮೇಲೆ ಮಂಜು ಮುಸುಕಿ ಕತ್ತಲೆ ಆವರಿಸಿತು. ಅವನು ತಡವರಿಸುತ್ತಾ ತನ್ನನ್ನು ಯಾರಾದರೂ ಕೈಹಿಡಿದು ನಡೆಸುವರೋ ಎಂದು ಹುಡುಕಾಡಿದನು.


ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು.


ಯೆಹೋವ ದೇವರು ನಿಮ್ಮನ್ನು ಈಜಿಪ್ಟನ್ನು ಬಾಧಿಸುವಂತೆ ಹುಣ್ಣುಗಳಿಂದಲೂ, ಮೂಲವ್ಯಾಧಿಯಿಂದಲೂ, ಕಜ್ಜಿಯಿಂದಲೂ, ಇಸುಬಿನಿಂದಲೂ ನೀವು ವಾಸಿಯಾಗದ ರೋಗಗಳಿಂದ ನಿಮ್ಮನ್ನು ಬಾಧಿಸುವರು.


ಯೆಹೋವ ದೇವರ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವುದು. ಕುದುರೆ, ಕತ್ತೆ, ಒಂಟೆ, ಎತ್ತು, ಕುರಿ, ಆಡು ಇವುಗಳ ಮೇಲೆ ಕಠಿಣವಾದ ಉಪದ್ರವ ಬರುವುದು.


ತಮ್ಮ ವೈರಿಗಳನ್ನು ದಂಡಿಸಿದರು. ನಿತ್ಯನಿಂದೆಯೇ ಅವರ ಪಾಲಾಯಿತು.


ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು.


ದುಷ್ಟರಿಗೆ ವಿಪತ್ತು ಇಲ್ಲವೋ? ಕೆಡುಕರಿಗೆ ವಿನಾಶ ಇಲ್ಲವೋ?


ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.


ಯೆಹೋವ ದೇವರು, ತಮ್ಮನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾರೆ. ಆದರೆ ದುಷ್ಟರೆಲ್ಲರನ್ನು ದಂಡಿಸುತ್ತಾರೆ.


ಯೆಹೋವ ದೇವರು ಸಾತ್ವಿಕರನ್ನು ಉದ್ಧರಿಸುತ್ತಾರೆ; ದುಷ್ಟರನ್ನು ದಂಡಿಸುತ್ತಾರೆ.


ತರುವಾಯ ಬರಗಾಲವು ಬಹಳ ಕಠಿಣವಾಗಿರುವುದರಿಂದ, ಸುಭಿಕ್ಷ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು