Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:2 - ಕನ್ನಡ ಸಮಕಾಲಿಕ ಅನುವಾದ

2 ಫಿಲಿಷ್ಟಿಯರು ಯಾಜಕರನ್ನೂ ಕಣಿಹೇಳುವವರನ್ನೂ ಕರೆದು, “ಯೆಹೋವ ದೇವರ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವುದು ನಮಗೆ ತಿಳಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಂತರ ಫಿಲಿಷ್ಟಿಯರು ಪೂಜಾರಿಗಳನ್ನೂ, ಕಣಿಹೇಳುವವರನ್ನೂ ಕರೆದು ಅವರಿಗೆ, “ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಪುನಃ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು ತಿಳಿಸಿರಿ” ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಫಿಲಿಷ್ಟಿಯರು ಅವರ ಪೂಜಾರಿಗಳನ್ನೂ ಮಂತ್ರಗಾರರನ್ನೂ ಕರೆದು, “ಸರ್ವೇಶ್ವರನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಮರಳಿ ಅದರ ಸ್ಥಳಕ್ಕೆ ಹೇಗೆ ಕಳುಹಿಸುವುದು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಫಿಲಿಷ್ಟಿಯರು ಪೂಜಾರಿಗಳನ್ನೂ ಕಣಿಹೇಳುವವರನ್ನೂ ಕರೆದು ಅವರಿಗೆ - ಯೆಹೋವನ ಮಂಜೂಷವನ್ನು ಏನು ಮಾಡಬೇಕು? ಅದನ್ನು ತಿರಿಗಿ ಅದರ ಸ್ಥಳಕ್ಕೆ ಹೇಗೆ ಕಳುಹಿಸಬೇಕು? ತಿಳಿಸಿರಿ ಅನ್ನಲು ಅವರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಫಿಲಿಷ್ಟಿಯರು ತಮ್ಮ ಅರ್ಚಕರನ್ನು ಮತ್ತು ಮಾಂತ್ರಿಕರನ್ನು ಕರೆದು, “ಯೆಹೋವನ ಪೆಟ್ಟಿಗೆಯನ್ನು ಏನು ಮಾಡೋಣ? ಇದನ್ನು ಮರಳಿ ಹಿಂದಕ್ಕೆ ಕಳುಹಿಸುವುದು ಹೇಗೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:2
10 ತಿಳಿವುಗಳ ಹೋಲಿಕೆ  

ಫರೋಹನು ಜ್ಞಾನಿಗಳನ್ನೂ, ಮಂತ್ರವಾದಿಗಳನ್ನೂ ಕರೆಸಿದನು. ಆಗ ಈಜಿಪ್ಟಿನ ಮಂತ್ರಗಾರರೂ ಸಹ ತಮ್ಮ ಮಾಟಗಳಿಂದ ಹಾಗೆಯೇ ಮಾಡಿದರು.


ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.


ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.


ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.


ರಾಜನು ಯೆಹೂದ್ಯರ ಮುಖ್ಯಯಾಜಕರನ್ನೂ ನಿಯಮ ಬೋಧಕರನ್ನೂ ಕರೆದು, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು.


ಯಾಕೋಬಿನ ಮನೆತನದವರು ಪೂರ್ವದೇಶಗಳ ಮಂತ್ರತಂತ್ರಗಳಲ್ಲಿ ಮಗ್ನರಾಗಿ, ಫಿಲಿಷ್ಟಿಯರಂತೆ ಕಣಿ ಹೇಳುವವರಾಗಿಯೂ, ಬೇರೆ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆಯುಳ್ಳವರಾಗಿಯೂ ಇರುವುದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀರಿ.


ಯೆಹೋವ ದೇವರ ಮಂಜೂಷವು ಫಿಲಿಷ್ಟಿಯರ ಸೀಮೆಯಲ್ಲಿ ಏಳು ತಿಂಗಳು ಇದ್ದ ತರುವಾಯ


ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು