Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:3 - ಕನ್ನಡ ಸಮಕಾಲಿಕ ಅನುವಾದ

3 ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ, ಅದರ ಸಂಗಡ ನಿಶ್ಚಯವಾಗಿ ದೋಷಪರಿಹಾರ ಕಾಣಿಕೆಯನ್ನು ಕಳುಹಿಸಿರಿ, ಆಗ ನೀವು ಸ್ವಸ್ಥರಾಗುವಿರಿ. ಅವರ ಕೈ ನಿಮ್ಮನ್ನು ಬಿಟ್ಟುಹೋಗದೆ ಇರುವ ಕಾರಣ ನಿಮಗೆ ತಿಳಿಯುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು, “ನೀವು ಇಸ್ರಾಯೇಲಿನ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು. ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ. ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿರುವುದಕ್ಕೆ ಕಾರಣವು ಗೊತ್ತಾಗುವುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮರುತ್ತರವಾಗಿ ಅವರು, “ಇಸ್ರಯೇಲ್ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ನಿಮ್ಮ ಪಾಪಕ್ಕಾಗಿ ಪ್ರಾಯಶ್ಚಿತ್ತ ದ್ರವ್ಯದೊಡನೆ ಕಳುಹಿಸಬೇಕು. ಆಗ ಮಾತ್ರ ನೀವು ಗುಣಹೊಂದುವಿರಿ; ಅಲ್ಲದೆ ಅವರ ದೇವರ ಶಿಕ್ಷಾಹಸ್ತ ನಿಮ್ಮನ್ನು ಬಾಧಿಸುತ್ತಿದ್ದುದಕ್ಕೆ ಕಾರಣ ಗೊತ್ತಾಗುವುದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ಇಸ್ರಾಯೇಲ್‍ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ಪ್ರಾಯಶ್ಚಿತ್ತದ್ರವ್ಯದೊಡನೆ ಕಳುಹಿಸಿದರೆ ಮಾತ್ರ ಗುಣಹೊಂದುವಿರಿ; ಆತನ ಶಿಕ್ಷಾಹಸ್ತವು ನಿಮ್ಮನ್ನು ಬಾಧಿಸುತ್ತಿದ್ದದ್ದಕ್ಕೆ ಕಾರಣವು ಗೊತ್ತಾಗುವದು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅರ್ಚಕರು ಮತ್ತು ಮಾಂತ್ರಿಕರು, “ಇಸ್ರೇಲರ ಪವಿತ್ರ ಪೆಟ್ಟಿಗೆಯನ್ನು ಹಿಂದಕ್ಕೆ ಕಳುಹಿಸುವುದಾದರೆ, ಬರಿದಾಗಿ ಕಳುಹಿಸಬೇಡಿ. ನೀವು ಕಾಣಿಕೆಗಳನ್ನು ಕಳುಹಿಸಲೇಬೇಕು. ಆಗ ಇಸ್ರೇಲರ ದೇವರು ನಿಮ್ಮ ಪಾಪಗಳನ್ನು ಪರಿಹರಿಸುತ್ತಾನೆ. ಆಗ ನೀವೆಲ್ಲಾ ಗುಣಹೊಂದುವಿರಿ; ಶುದ್ಧರಾಗುವಿರಿ. ದೇವರು ನಿಮ್ಮನ್ನು ದಂಡಿಸುವುದನ್ನು ನಿಲ್ಲಿಸಬೇಕಾದರೆ ನೀವು ಈ ಕಾರ್ಯಗಳನ್ನು ಮಾಡಬೇಕು. ಆಗ ದೇವರು ನಿಮ್ಮನ್ನು ಬಾಧಿಸುವುದಿಲ್ಲ” ಎಂದು ಉತ್ತರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:3
15 ತಿಳಿವುಗಳ ಹೋಲಿಕೆ  

ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


ಕತ್ತೆಮರಿಗೆ ಬದಲಾಗಿ ಕುರಿಮರಿಯನ್ನು ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ, ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಪುತ್ರರಲ್ಲಿ ಚೊಚ್ಚಲಾದವರನ್ನೆಲ್ಲಾ ವಿಮೋಚಿಸಬೇಕು. “ನನ್ನ ಮುಂದೆ ಯಾರೂ ಬರಿಗೈಯಿಂದ ಕಾಣಿಸಿಕೊಳ್ಳಬಾರದು.


ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ.


ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.


ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.


ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು.


ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು.


ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.


ಯೆಹೋವ ದೇವರ ಮಂಜೂಷವನ್ನು ಬಂಡಿಯ ಮೇಲೆ ಇಟ್ಟು, ನೀವು ಕಳುಹಿಸಿಕೊಡುವ ನಿಮ್ಮ ದೋಷಪರಿಹಾರ ಕಾಣಿಕೆಯ ಬಂಗಾರದ ವಸ್ತುಗಳನ್ನು ಅದರ ಪಕ್ಕದಲ್ಲಿ ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ, ಅದು ಹೋಗುವಹಾಗೆ ಕಳುಹಿಸಿರಿ.


ಆದರೆ ಫರೋಹನು ತನಗೆ ಉಪಶಮನವಾಯಿತೆಂದು ನೋಡಿದಾಗ, ಯೆಹೋವ ದೇವರು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣ ಮಾಡಿಕೊಂಡು, ಮೋಶೆ ಮತ್ತು ಆರೋನರ ಮಾತನ್ನು ಕೇಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು