Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 6:9 - ಕನ್ನಡ ಸಮಕಾಲಿಕ ಅನುವಾದ

9 ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅ ಹಸುಗಳು ತಾವಾಗಿ ಸ್ವದೇಶದ ದಾರಿ ಹಿಡಿದು ಬೇತ್ ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ, ಆ ಮಾರ್ಗವನ್ನು ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಬಾಧಿಸಲ್ಲಿಲ್ಲ ಇದು ಆಕಸ್ಮಿಕವಾಗಿ ಬಂದಿದೆ ಎಂದು, ತಿಳಿದುಕೊಳ್ಳಿರಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದು ತಾನಾಗಿ ಸ್ವದೇಶದ ದಾರಿ ಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈ ದೊಡ್ಡ ಕೇಡನ್ನು ಬರಮಾಡಿದವನು ಯೆಹೋವನೇ ಎಂದೂ ಆ ಮಾರ್ಗ ಹಿಡಿಯದಿದ್ದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ನಮ್ಮ ಅದೃಷ್ಟವೇ ಎಂದೂ ತಿಳಿದುಕೊಳ್ಳಿರಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಅದರ ಕಡೆ ಗಮನವಿರಲಿ. ಅದು ತಾನಾಗಿ ಇಸ್ರೇಲಿಗೆ ಸೇರಿದ ಬೇತ್‌ಷೆಮೆಷಿನ ಕಡೆಗೆ ಹೋದರೆ, ಆಗ ಆ ದೊಡ್ಡ ಕೇಡನ್ನು ನಮಗುಂಟು ಮಾಡಿದವನು ಯೆಹೋವನೇ ಸರಿ. ಆದರೆ ಹಸುಗಳು ಬೇತ್‌ಷೆಮೆಷಿಗೆ ಹೋಗದಿದ್ದರೆ, ನಮ್ಮನ್ನು ಶಿಕ್ಷಿಸಿದವನು ಯೆಹೋವನಲ್ಲವೆಂದು ನಮಗೆ ಗೊತ್ತಾಗುವುದು. ನಮಗುಂಟಾದ ಕಾಯಿಲೆಯು ತಾನಾಗಿಯೇ ಬಂದದ್ದೆಂದು ತಿಳಿಯುವುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 6:9
13 ತಿಳಿವುಗಳ ಹೋಲಿಕೆ  

ಬಾಲಾದಿಂದ ಪಶ್ಚಿಮಕ್ಕಿರುವ ಸೇಯೀರ್ ಬೆಟ್ಟವನ್ನು ಸುತ್ತಿ, ಅಲ್ಲಿಂದ ಕೆಸಾಲೋನಿನ ಯಾರೀಮ್ ಬೆಟ್ಟದ ಉತ್ತರಕ್ಕೂ ಅಲ್ಲಿಂದ ಬೇತ್ ಷೆಮೆಷ್ ಕಡೆಗೆ ಇಳಿದು ತಿಮ್ನಾಗೆ ಹೋಯಿತು.


ಆಗ ಒಬ್ಬ ಯಾಜಕನು ಅದೇ ಮಾರ್ಗವಾಗಿ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು.


ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.


ಆಗ ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಬೆಟ್ಟಕ್ಕೆ ಹೋಗಿದ್ದೆನು. ಅಲ್ಲಿ ಸೌಲನು ತನ್ನ ಈಟಿಯನ್ನು ಊರಿಕೊಂಡು ನಿಂತಿದ್ದನು. ಆಗ ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.


ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ, ಅದರ ಸಂಗಡ ನಿಶ್ಚಯವಾಗಿ ದೋಷಪರಿಹಾರ ಕಾಣಿಕೆಯನ್ನು ಕಳುಹಿಸಿರಿ, ಆಗ ನೀವು ಸ್ವಸ್ಥರಾಗುವಿರಿ. ಅವರ ಕೈ ನಿಮ್ಮನ್ನು ಬಿಟ್ಟುಹೋಗದೆ ಇರುವ ಕಾರಣ ನಿಮಗೆ ತಿಳಿಯುವುದು,” ಎಂದರು.


ಆಯಿನ್, ಯುಟ್ಟಾ, ಬೇತ್ ಷೆಮೆಷ್ ಎಂಬ ಆ ಎರಡು ಗೋತ್ರಗಳಿಂದ ಈ ಒಂಬತ್ತು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.


ಅವರು ಆ ಪ್ರಕಾರವೇ ಎರಡು ಹಾಲು ಕರೆಯುವ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು


ಆಗ ಹಸುಗಳು ಕೂಗುತ್ತಾ ಬೇತ್ ಷೆಮೆಷ್ ಕಡೆಗೆ ಹೋಗುವ ಮಾರ್ಗವನ್ನು ಹಿಡಿದು, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ ಹೆದ್ದಾರಿಯಲ್ಲಿ ಹೋದವು. ಫಿಲಿಷ್ಟಿಯರ ಅಧಿಪತಿಗಳು ಬೇತ್ ಷೆಮೆಷ್ ಊರಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.


ಆದರೆ ಫರೋಹನು ತನಗೆ ಉಪಶಮನವಾಯಿತೆಂದು ನೋಡಿದಾಗ, ಯೆಹೋವ ದೇವರು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣ ಮಾಡಿಕೊಂಡು, ಮೋಶೆ ಮತ್ತು ಆರೋನರ ಮಾತನ್ನು ಕೇಳಲಿಲ್ಲ.


ಬೆನ್ ಡೆಕೆರ್ ಮಾಕಾಚ್, ಶಾಲ್ಬೀಮ್, ಬೇತ್ ಷೆಮೆಷ್, ಏಲೋನ್ ಹಾಗು ಬೇತ್ ಹಾನಾನ್‌ಗಳಲ್ಲಿ ಅಧಿಕಾರಿ.


ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ, ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು