Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:2 - ಕನ್ನಡ ಸಮಕಾಲಿಕ ಅನುವಾದ

2 ಮಂಜೂಷವು ಕಿರ್ಯತ್ ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರ್ಷಗಳಾದವು. ಆಗ, ಇಸ್ರಾಯೇಲ್ ಮನೆತನದವರೆಲ್ಲರು ಯೆಹೋವ ದೇವರಿಗೋಸ್ಕರ ಹಂಬಲಿಸಿ ಗೋಳಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಮಂಜೂಷವು ಕಿರ್ಯಾತ್ಯಾರೀಮಿಗೆ ಬಂದು ಬಹಳ ದಿನಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದು ಹೋದವು. ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ದುಃಖಿಸುತ್ತಾ ಯೆಹೋವನ ಕಡೆಗೆ ತಿರುಗಿಕೊಳ್ಳಲು ಹಂಬಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಮಂಜೂಷವು ಕಿರ್ಯತ್ಯಾರೀಮಿಗೆ ಬಂದು ಬಹಳ ದಿವಸಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದುಹೋದವು. ಈ ಕಾಲದಲ್ಲಿ ಎಲ್ಲ ಇಸ್ರಯೇಲರು ಸರ್ವೇಶ್ವರನಿಗಾಗಿ ಹಂಬಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮಂಜೂಷವು ಕಿರ್ಯತ್ಯಾರೀವಿುಗೆ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರುಷಗಳು ಕಳೆದುಹೋದವು; ಈ ಕಾಲದಲ್ಲಿ ಎಲ್ಲಾ ಇಸ್ರಾಯೇಲ್ಯರು ಯೆಹೋವನನ್ನೇ ಹಂಬಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಈ ಪೆಟ್ಟಿಗೆಯು ಕಿರ್ಯತ್ಯಾರೀಮಿನವರಲ್ಲಿ ಬಹುಕಾಲದವರೆಗೆ ಅಂದರೆ ಇಪ್ಪತ್ತು ವರ್ಷಗಳವರೆಗೆ ಇತ್ತು. ಇಸ್ರೇಲರು ಯೆಹೋವನ ಮಾರ್ಗವನ್ನು ಮತ್ತೆ ಅನುಸರಿಸಲು ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:2
13 ತಿಳಿವುಗಳ ಹೋಲಿಕೆ  

ದುಃಖಿಸುವವರು ಧನ್ಯರು, ಅವರು ಆದರಣೆ ಹೊಂದುವರು.


ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರ ದೂತನು ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ಹೇಳುವಾಗ, ಜನರು ಗಟ್ಟಿಯಾಗಿ ಅತ್ತರು.


ಆಗ ಇಸ್ರಾಯೇಲರು ಪ್ರಯಾಣ ಮಾಡುವಾಗ ಮೂರನೆಯ ದಿವಸದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ ಯಾರೀಮ್ ಎಂಬ ಅವರ ಪಟ್ಟಣಗಳಿಗೆ ಬಂದರು.


ಕಿರ್ಯತ್ ಯಾರೀಮಿನವರು ಬಂದು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡು, ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟರು. ಅವನ ಪುತ್ರನಾದ ಎಲಿಯಾಜರನನ್ನು ಯೆಹೋವ ದೇವರ ಮಂಜೂಷವನ್ನು ಕಾಯಲು ಪ್ರತಿಷ್ಠಿಸಿದರು.


ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.


ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರುಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ,” ಎಂದನು.


ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.


ಹೀಗೆ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತರುವುದಕ್ಕೆ ದಾವೀದನು ಈಜಿಪ್ಟಿನ ಶೀಹೋರ್ ನದಿ ಮೊದಲ್ಗೊಂಡು ಲಿಬೋ ಹಮಾತಿನ ಪ್ರದೇಶದವರೆಗೆ ಇರುವ ಸಮಸ್ತ ಇಸ್ರಾಯೇಲರನ್ನು ಕೂಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು