Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:6 - ಕನ್ನಡ ಸಮಕಾಲಿಕ ಅನುವಾದ

6 ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಅಲ್ಲಿ ಕೂಡಿಬಂದು, ನೀರು ಸೇದಿ, ಯೆಹೋವನ ಮುಂದೆ ಹೊಯ್ದು, ಆ ದಿನ ಉಪವಾಸವಿದ್ದು, “ನಾವು ನಿನಗೆ ದ್ರೋಹಿಗಳಾಗಿದ್ದೇವೆ” ಎಂದು ಯೆಹೋವನಿಗೆ ಅರಿಕೆಮಾಡಿದರು. ಆನಂತರ ಸಮುವೇಲನು ನ್ಯಾಯಪಾಲಕನಾಗಿದ್ದು, ಮಿಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೇ ಅವರು ಅಲ್ಲಿ ಕೂಡಿಬಂದು, ನೀರು ಸೇದಿ ಸರ್ವೇಶ್ವರನ ಮುಂದೆ ಹೊಯ್ದು, ಆ ದಿವಸ ಉಪವಾಸವಿದ್ದು, ದ್ರೋಹಿಗಳಾಗಿದ್ದೇವೆಂದು ಸರ್ವೇಶ್ವರನಿಗೆ ಅರಿಕೆಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಯೇಲರ ವ್ಯಾಜ್ಯಗಳನ್ನು ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಅಲ್ಲಿ ಕೂಡಿಬಂದು ನೀರು ಸೇದಿ ಯೆಹೋವನ ಮುಂದೆ ಹೊಯ್ದು ಆ ದಿವಸ ಉಪವಾಸವಿದ್ದು - ನಿನಗೆ ದ್ರೋಹಿಗಳಾಗಿದ್ದೇವೆಂದು ಆತನಿಗೆ ಅರಿಕೆ ಮಾಡಿದರು. ಸಮುವೇಲನು ವಿುಚ್ಪೆಯಲ್ಲಿ ಇಸ್ರಾಯೇಲ್ಯರ ವ್ಯಾಜ್ಯಗಳನ್ನು ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲರೆಲ್ಲರು ಮಿಚ್ಪೆಯಲ್ಲಿ ಒಟ್ಟುಗೂಡಿದರು. ಅವರು ನೀರನ್ನು ತೆಗೆದುಕೊಂಡು ಬಂದು ಯೆಹೋವನ ಮುಂದೆ ಅದನ್ನು ಸುರಿದರು. ಈ ರೀತಿ ಅಂದು ಅವರು ಉಪವಾಸವನ್ನು ಆರಂಭಿಸಿದರು. ಅಂದು ಅವರು ಯಾವ ಆಹಾರವನ್ನೂ ತೆಗೆದುಕೊಳ್ಳಲಿಲ್ಲ. ಅಲ್ಲದೆ ಅವರು ತಮ್ಮ ಪಾಪಗಳನ್ನು ಅರಿಕೆ ಮಾಡಿದರು. “ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ” ಎಂದು ಅವರು ಹೇಳಿದರು. ಹೀಗಿರಲು, ಸಮುವೇಲನು ಇಸ್ರೇಲರ ನ್ಯಾಯಾಧೀಶನಾಗಿ ಮಿಚ್ಪೆಯಲ್ಲಿ ಸೇವೆ ಸಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:6
47 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.


ಅದಕ್ಕೆ ಹನ್ನಳು ಅವನಿಗೆ ಉತ್ತರವಾಗಿ, “ನನ್ನ ಒಡೆಯನೇ, ಹಾಗಲ್ಲ. ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ. ನಾನು ದ್ರಾಕ್ಷಾರಸವನ್ನಾದರೂ ಮದ್ಯಪಾನವನ್ನಾದರೂ ಕುಡಿದವಳಲ್ಲ. ನಾನು ಯೆಹೋವ ದೇವರ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ತೋಡಿಕೊಳ್ಳುತ್ತಾ ಇದ್ದೇನೆ.


ಆಗ ಇಸ್ರಾಯೇಲರು ಯೆಹೋವ ದೇವರಿಗೆ ಕೂಗಿ, “ನಮ್ಮ ದೇವರನ್ನು ಬಿಟ್ಟು, ಬಾಳನನ್ನು ಸೇವಿಸಿದ್ದರಿಂದ, ನಾವು ನಿಮಗೆ ವಿರೋಧವಾಗಿ ಪಾಪಮಾಡಿದೆವು,” ಎಂದರು.


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”


ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.


ನಮ್ಮ ಪಿತೃಗಳಂತೆ ನಾವು ಕೂಡಾ ಪಾಪಮಾಡಿದ್ದೇವೆ; ಅಕ್ರಮ ಮಾಡಿದ್ದೇವೆ; ದುಷ್ಟಕೃತ್ಯಗಳನ್ನು ನಡೆಸಿದ್ದೇವೆ.


ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ. ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ. ದೇವರು ನಮಗೆ ಆಶ್ರಯವಾಗಿದ್ದಾರೆ.


ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ, ಆತನಿಗೆ: ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿಮಗೆ ವಿರೋಧವಾಗಿಯೂ ನಾನು ಪಾಪಮಾಡಿದ್ದೇನೆ.


ನಿಮ್ಮ ನಿಯಮವನ್ನು ಕೈಗೊಳ್ಳದೇ ಇರುವಾಗ ನನ್ನ ಕಣ್ಣಿನಿಂದ ಕಣ್ಣೀರು ಧಾರೆಯಾಗಿ ಹರಿಯುತ್ತಿವೆ.


ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿದರೆ,


“ನೀನು ಅವರಿಗೆ ನ್ಯಾಯತೀರಿಸುವೆಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸುವೆಯೋ? ಹಾಗಾದರೆ ಅವರ ಪಿತೃಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.


ಯೆಹೋವ ದೇವರು ಕಟಾಕ್ಷಿಸಿ, ಪರಲೋಕದಿಂದ ನೋಡುವ ತನಕ ನೇತ್ರವು ನಿರಂತರ ಕಣ್ಣೀರು ಸುರಿಸುತ್ತದೆ.


ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.


ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’


“ನಿನ್ನ ದೇವರು ಎಲ್ಲಿ?” ಎಂದು ಜನರು, ದಿನವೆಲ್ಲಾ ನನ್ನನ್ನು ಕೇಳುವುದರಿಂದ ಹಗಲುರಾತ್ರಿ ನನ್ನ ಕಣ್ಣೀರೇ ನನಗೆ ಆಹಾರವಾಗಿದೆ.


ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ. ರಾತ್ರಿಯೆಲ್ಲಾ ನಾನು ಅಳುವುದರಿಂದ ನನ್ನ ಹಾಸಿಗೆಯು ಕಣ್ಣೀರಿನ ಪ್ರವಾಹದಿಂದ ತೇಲಾಡುತ್ತದೆ, ಕಣ್ಣೀರಿನಿಂದ ನನ್ನ ಮಂಚವನ್ನು ತೊಯಿಸಿದ್ದೇನೆ.


ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.


“ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ.


ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. ದೇವರು ಮುಯ್ಯಿತೀರಿಸಲಿಲ್ಲ,


ಆದರೆ ನನ್ನ ಮಿತ್ರ ನನಗಾಗಿ ವಿಜ್ಞಾಪನೆಮಾಡುತ್ತಿದ್ದಾರೆ; ನನ್ನ ಕಣ್ಣುಗಳು ದೇವರ ಮುಂದೆ ಕಣ್ಣೀರು ಸುರಿಸುತ್ತವೆ.


ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ.


ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು.


ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.


“ ‘ಆದರೆ ಅವರು ನನಗೆ ಮಾಡಿದ ತಮ್ಮ ದುಷ್ಕೃತ್ಯದಲ್ಲಿರುವ ತಮ್ಮ ಅಕ್ರಮವನ್ನೂ, ತಮ್ಮ ಪಿತೃಗಳ ಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದುಕೊಂಡದ್ದನ್ನೂ,


ಮಿಚ್ಪಾ ಎಂದೂ ಹೆಸರಾಯಿತು. ಏಕೆಂದರೆ, “ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವ ದೇವರು ನಮ್ಮನ್ನು ನೋಡಿಕೊಳ್ಳುತ್ತಾ ಇರಲಿ.


“ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು.


ಇದಲ್ಲದೆ ಸಮುಯೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.


ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು.


ಮಿಚ್ಪೆ, ಕೆಫೀರಾ, ಮೋಚಾ,


ಯೆಹೋವ ದೇವರ ದೂತನು ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ಹೇಳುವಾಗ, ಜನರು ಗಟ್ಟಿಯಾಗಿ ಅತ್ತರು.


ಇಸ್ರಾಯೇಲರು ಯೆಹೋವ ದೇವರಿಗೆ, “ನಾವು ಪಾಪಮಾಡಿದೆವು. ನೀವು ನಿಮಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡಿರಿ. ಆದರೆ ಈ ಹೊತ್ತು ನಮ್ಮನ್ನು ರಕ್ಷಿಸಿರಿ,” ಎಂದು ಬೇಡಿಕೊಂಡರು.


ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು.


ಆಗ ಇಸ್ರಾಯೇಲರೆಲ್ಲರೂ ಸಮಸ್ತ ಸೇನೆಯೂ ಬೇತೇಲಿಗೆ ಹೊರಟು, ಅಲ್ಲಿ ಅಳುತ್ತಾ ಯೆಹೋವ ದೇವರ ಮುಂದೆ ಕುಳಿತುಕೊಂಡು, ಆ ಸಂಜೆಯವರೆಗೆ ಉಪವಾಸವಾಗಿದ್ದು, ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.


ಸಮುಯೇಲನು ಇಸ್ರಾಯೇಲರನ್ನು ಮಿಚ್ಪೆಯಲ್ಲಿ ಯೆಹೋವ ದೇವರ ಬಳಿಗೆ ಒಟ್ಟಾಗಿ ಕರೆದು ಅವರಿಗೆ,


ಇವರು ಅವರ ಸಂಗಡ ಯುದ್ಧಮಾಡಿದರು. ಆದ್ದರಿಂದ ಅವರು ಯೆಹೋವ ದೇವರಿಗೆ ಮೊರೆಯಿಟ್ಟು, ‘ನಾವು ಯೆಹೋವ ದೇವರಾದ ನಿಮ್ಮನ್ನು ಬಿಟ್ಟು ಬಾಳನನ್ನೂ, ಅಷ್ಟೋರೆತನನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀವು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸಿರಿ; ನಾವು ನಿಮ್ಮ ಸೇವೆ ಮಾಡುವೆವು,’ ಎಂದರು.


ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದು,


ನಿಟ್ಟುಸಿರೇ ನನ್ನ ದೈನಂದಿನ ಆಹಾರವಾಗಿದೆ; ನನ್ನ ನರಳಾಟವು ಜಲಧಾರೆಯಂತಿದೆ.


ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.


“ಯಾಜಕರೇ, ಇದನ್ನು ನೀವು ಕೇಳಿರಿ; ಇಸ್ರಾಯೇಲಿನ ಮನೆತನದವರೇ ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದ ಕಾರಣ ನಿಮಗೆ ವಿರುದ್ಧವಾಗಿ ಈ ನ್ಯಾಯತೀರ್ಪು ಬಂದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು