Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 7:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಸಮುಯೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು, ಇಸ್ರಾಯೇಲರಿಗೋಸ್ಕರ ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಉತ್ತರವನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಸಮುವೇಲನು ಹಾಲುಕುಡಿಯುವ ಒಂದು ಕುರಿಮರಿಯನ್ನು ತಂದು ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸಿ, ಇಸ್ರಯೇಲರ ಪರವಾಗಿ ಪ್ರಾರ್ಥನೆಮಾಡಿದನು. ಸರ್ವೇಶ್ವರ ಸದುತ್ತರವನ್ನು ದಯಪಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಮುವೇಲನು ಕುರಿಮರಿಯೊಂದನ್ನು ತಂದು ಯೆಹೋವನಿಗೆ ಸರ್ವಾಂಗಹೋಮವನ್ನಾಗಿ ಅರ್ಪಿಸಿದನು. ಸಮುವೇಲನು ಇಸ್ರೇಲರಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಸಮುವೇಲನ ಪ್ರಾರ್ಥನೆಗೆ ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 7:9
16 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ಆದರೆ ಅವನು ರಾಮಕ್ಕೆ ತಿರುಗಿ ಬರುತ್ತಾ ಇದ್ದನು. ಏಕೆಂದರೆ ಅಲ್ಲಿ ಅವನ ಮನೆ ಇತ್ತು, ಅಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಯೆಹೋವ ದೇವರಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.


ಆಗ ಸಮುಯೇಲನು, “ನಾನು ಹೋಗುವುದು ಹೇಗೆ? ಸೌಲನು ಅದನ್ನು ಕೇಳಿದರೆ, ನನ್ನನ್ನು ಕೊಂದುಹಾಕುವನು,” ಎಂದನು. ಅದಕ್ಕೆ ಯೆಹೋವ ದೇವರು, “ನೀನು ಒಂದು ಕಡಸನ್ನು ನಿನ್ನ ಸಂಗಡ ತೆಗೆದುಕೊಂಡುಹೋಗಿ, ‘ನಾನು ಯೆಹೋವ ದೇವರಿಗಾಗಿ ಯಜ್ಞಮಾಡುವುದಕ್ಕೆ ಬಂದೆನು,’ ಎಂದು ಹೇಳಿ,


“ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದು ಹೋಗಬೇಕು. ನಾನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು,” ಎಂದನು.


ಅವರು ಇವರಿಗೆ ಉತ್ತರವಾಗಿ, “ಅವನು ಇದ್ದಾನೆ, ನಿಮ್ಮ ಮುಂದೆ ಇದ್ದಾನೆ, ಈಗ ಬೇಗ ಹೋಗಿರಿ, ಏಕೆಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವುದರಿಂದ ಅವನು ಈ ಹೊತ್ತು ಪಟ್ಟಣಕ್ಕೆ ಬಂದಿದ್ದಾನೆ.


ಆ ಊರಿನ ಮನುಷ್ಯರು ಬೆಳಿಗ್ಗೆ ಎದ್ದಾಗ, ಬಾಳನ ಬಲಿಪೀಠವು ಕೆಡವಲಾಗಿದ್ದನ್ನು ಮತ್ತು ಅದರ ಪಕ್ಕದಲ್ಲಿದ್ದ ಅಶೇರ ಸ್ತಂಭವನ್ನು ಕಡಿಯಲಾಗಿರುವುದನ್ನು ಕಂಡರು. ಹೊಸದಾಗಿ ಕಟ್ಟಿದ ಬಲಿಪೀಠದ ಮೇಲೆ ಆ ಎರಡನೆಯ ಹೋರಿಯ ಬಲಿ ಅರ್ಪಿಸಲಾಗಿತ್ತು.


ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಆ ಎರಡನೆಯ ಹೋರಿಯನ್ನು ತಂದು, ನೀನು ಕಡಿದುಹಾಕಿದ ಅಶೇರ ಸ್ತಂಭವನ್ನು ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು,” ಎಂದರು.


“ಹೋರಿಯನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ, ಏಳು ದಿವಸಗಳವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸಿದರೆ ಅಂಗೀಕಾರವಾಗುವುದು.


ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ.


ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.


ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದರಿಂದ, ಯೆಹೋವ ದೇವರ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತನವು ಹೆಚ್ಚಾಗಿದೆ ಎಂದು ತಿಳಿದುಕೊಂಡು ನೋಡುವ ಹಾಗೆ, ನಾನು ಯೆಹೋವ ದೇವರಿಗೆ ಮೊರೆಯಿಡುವೆನು. ಆಗ ಅವರು ಗುಡುಗನ್ನೂ, ಮಳೆಯನ್ನೂ ಕಳುಹಿಸುವರು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು