Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 8:7 - ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋವ ದೇವರು ಸಮುಯೇಲನಿಗೆ, “ಜನರು ನಿನಗೆ ಹೇಳಿದ್ದೆಲ್ಲದರಲ್ಲಿ ಅವರ ಮಾತು ಕೇಳು. ಏಕೆಂದರೆ ಅವರು ನಿನ್ನನ್ನು ತಿರಸ್ಕಾರ ಮಾಡಿಲ್ಲ. ನಾನು ಅವರನ್ನು ಆಳದ ಹಾಗೆ ನನ್ನನ್ನೇ ತಿರಸ್ಕಾರಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು ಸಮುವೇಲನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆಯನ್ನು ಬೇಡವೆನ್ನುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳಿಕೆಗೆ ಬೇಡವೆನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನು ಅವನಿಗೆ, “ಜನರು ನಿನಗೆ ಹೇಳಿದಂತೆ ಮಾಡು ಅವರು ನಿನ್ನನ್ನು ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ತಿರಸ್ಕರಿಸಿದ್ದಾರೆ! ಅವರಿಗೆ ನಾನು ರಾಜನಾಗಿರುವುದು ಬೇಕಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 8:7
22 ತಿಳಿವುಗಳ ಹೋಲಿಕೆ  

ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಅವರಿಗೆ, ‘ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು,’ ಎಂದು ಹೇಳಿದಿರಿ. ಆದ್ದರಿಂದ ಈಗ ಯೆಹೋವ ದೇವರ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ, ನಿಮ್ಮ ಕುಲಗಳ ಪ್ರಕಾರವಾಗಿಯೂ ಬನ್ನಿರಿ,” ಎಂದನು.


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.


ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.


“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


“ನಿಮ್ಮನ್ನು ಸ್ವಾಗತಿಸುವವರು ನನ್ನನ್ನು ಸ್ವಾಗತಿಸುತ್ತಾರೆ. ನನ್ನನ್ನು ಸ್ವಾಗತಿಸಿದವರು, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವಾಗತಿಸುತ್ತಾರೆ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತನ್ನ ಧಣಿಗಿಂತ ಆಳು ದೊಡ್ಡವನಲ್ಲ, ಹಾಗೆಯೇ ಕಳುಹಿಸಲಾದವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.


ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು, ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು. ಏಕೆಂದರೆ ನಾನು ಕೂಗಿದಾಗ, ಯಾರು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ, ಇವರು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.”


ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ, “ಈ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿದ್ದರೆ, ನೀನು ಎದ್ದು ಅವರ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವ ಮಾತಿನಂತೆಯೇ ನೀನು ಮಾಡಬೇಕು,” ಎಂದರು.


ಗಿದ್ಯೋನನು ಅವರಿಗೆ, “ನಾನು ನಿಮ್ಮನ್ನು ಆಳುವುದಿಲ್ಲ. ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ. ಯೆಹೋವ ದೇವರೇ ನಿಮ್ಮನ್ನು ಆಳುವರು.”


ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದ ದಿನವು ಮೊದಲುಗೊಂಡು ಈ ದಿನದವರೆಗೂ ಅವರು ನನ್ನನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿ, ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡುತ್ತಾರೆ.


ಯೆಹೋವ ದೇವರು ಸಮುಯೇಲನಿಗೆ, “ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು,” ಎಂದರು. ಆಗ ಸಮುಯೇಲನು ಇಸ್ರಾಯೇಲ್ ಜನರಿಗೆ, “ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ,” ಎಂದನು.


ಸಮುಯೇಲನು ಇಸ್ರಾಯೇಲರೆಲ್ಲರಿಗೆ, “ನೀವು ನನಗೆ ಹೇಳಿದ್ದೆಲ್ಲದರಲ್ಲಿ ನಿಮ್ಮ ಮಾತು ಕೇಳಿ, ನಿಮ್ಮ ಮೇಲೆ ಒಬ್ಬ ಅರಸನನ್ನು ಇಟ್ಟೆನು.


“ಆದರೆ ಅಮ್ಮೋನ್ಯರ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧಮಾಡಲು ಬರುವುದನ್ನು ಕಂಡಾಗ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೆ ಅರಸರಾಗಿದ್ದರು. ಆಗ ನೀವು, ‘ನಮಗೆ ಹಾಗೆ ಬೇಡ, ಒಬ್ಬ ಅರಸನು ನಮ್ಮನ್ನು ಆಳಬೇಕು,’ ಎಂದಿರಿ.


‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ.


ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.


ಆದರೆ ಇಸ್ರಾಯೇಲಿನ ಜನರೋ ನಿನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಏಕೆಂದರೆ ಅವರು ನನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು