Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:11 - ಕನ್ನಡ ಸಮಕಾಲಿಕ ಅನುವಾದ

11 ಅವರು ದಿಣ್ಣೆಯನ್ನು ಹತ್ತಿ ಪಟ್ಟಣದೊಳಗೆ ಹೋಗುವಾಗ, ನೀರು ಸೇದಲು ಬರುವ ಹುಡುಗಿಯರನ್ನು ಕಂಡು, “ದರ್ಶಿಯು ಇಲ್ಲಿ ಇದ್ದಾನೋ?” ಎಂದು ಅವರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರಿಬ್ಬರೂ ಗುಡ್ಡವನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವುದಕ್ಕೋಸ್ಕರ ಊರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು, “ದರ್ಶಿಯು ಊರಲ್ಲಿದ್ದಾನೋ” ಎಂದು ಕೇಳಿದರು. ಅವರು, “ಇದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರಿಬ್ಬರೂ ದಿನ್ನೆಯನ್ನು ಹತ್ತಿ ದೇವರ ಮನುಷ್ಯನಿದ್ದ ಪಟ್ಟಣವನ್ನು ಸಮೀಪಿಸಲು ನೀರು ಸೇದುವದಕ್ಕೋಸ್ಕರ ಹೊರಗೆ ಬಂದಿದ್ದ ಸ್ತ್ರೀಯರನ್ನು ಕಂಡು - ದರ್ಶಿಯು ಊರಲ್ಲಿದ್ದಾನೋ ಎಂದು ಕೇಳಲು ಅವರು - ಇದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸೌಲನು ಮತ್ತು ಆ ಸೇವಕನು ಬೆಟ್ಟದ ಮೇಲೆ ನಡೆಯುತ್ತಾ ಆ ಪಟ್ಟಣಕ್ಕೆ ಹೋದರು. ಆ ದಾರಿಯಲ್ಲಿ ಅವರು ಕೆಲವು ಸ್ತ್ರೀಯರನ್ನು ಸಂಧಿಸಿದರು. ಆ ಸ್ತ್ರೀಯರು ನೀರನ್ನು ತರಲು ಹೋಗುತ್ತಿದ್ದರು. ಸೌಲನು ಮತ್ತು ಆ ಸೇವಕನು, “ದರ್ಶಿಯು ಇಲ್ಲಿರುವನೇ?” ಎಂದು ಆ ಯುವತಿಯರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:11
9 ತಿಳಿವುಗಳ ಹೋಲಿಕೆ  

ಆಗ ಸ್ತ್ರೀಯರು ನೀರು ತರಲು ಬರುವ ಸಂಜೆಯ ಸಮಯವಾಗಿತ್ತು. ಅವನು ಪಟ್ಟಣದ ಹೊರಗೆ ನೀರಿನ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು.


ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.


ನೀರು ಸೇದುವ ಸ್ಥಳಗಳ ಹತ್ತಿರ ಗಾಯಕರ ಶಬ್ದದಿಂದ ಯೆಹೋವ ದೇವರ ನೀತಿಸಾಧನೆಗಳನ್ನು ವರ್ಣಿಸುತ್ತಾರೆ. ಇಸ್ರಾಯೇಲಿನಲ್ಲಿ ಅವರ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ಮಹತ್ಕಾರ್ಯಗಳನ್ನು ತಿರುಗಿ ಪ್ರಕಟಿಸುವರು. “ಆಗ ಯೆಹೋವ ದೇವರ ಜನರು ಪಟ್ಟಣದ ಬಾಗಿಲುಗಳಿಗೆ ಇಳಿದು ಬರುವರು.


ಅವನು ಹಾಗೆ ಹೇಳುವುದನ್ನು ಮುಗಿಸುವುದಕ್ಕಿಂತ ಮುಂಚೆ ಅಬ್ರಹಾಮನ ಸಹೋದರನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಾಳ ಮಗ ಬೆತೂಯೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲೆ ಇಟ್ಟುಕೊಂಡು ಹೊರಗೆ ಬಂದಳು.


ಅದಕ್ಕೆ ಅವರು, “ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಉರುಳಿಸುತ್ತಾರೆ. ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ,” ಎಂದರು.


ಯಾಕೋಬನು ಇನ್ನೂ ಅವರ ಸಂಗಡ ಮಾತನಾಡುತ್ತಿದ್ದಾಗ, ಕುರಿಗಳನ್ನು ಮೇಯಿಸುವ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.


ಆಗ ಸೌಲನು ಸೇವಕನಿಗೆ, “ನಿನ್ನ ಮಾತು ಒಳ್ಳೆಯದು. ನಾವು ಹೋಗೋಣ ಬಾ,” ಎಂದನು. ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.


ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚು ಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು