Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:12 - ಕನ್ನಡ ಸಮಕಾಲಿಕ ಅನುವಾದ

12 ಅವರು ಇವರಿಗೆ ಉತ್ತರವಾಗಿ, “ಅವನು ಇದ್ದಾನೆ, ನಿಮ್ಮ ಮುಂದೆ ಇದ್ದಾನೆ, ಈಗ ಬೇಗ ಹೋಗಿರಿ, ಏಕೆಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವುದರಿಂದ ಅವನು ಈ ಹೊತ್ತು ಪಟ್ಟಣಕ್ಕೆ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ಅವನು ಈಗಲೇ ಇಲ್ಲಿಗೆ ಬಂದಿರುವನು; ಬೇಗನೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಈ ದಿನ ನಮ್ಮ ಊರಿನವರು ಗುಡ್ಡದ ಮೇಲೆ ಬಲಿಯನ್ನರ್ಪಿಸುವುದರಿಂದ ಅವರು ಈಗಲೇ ಇಲ್ಲಿಗೆ ಬಂದರು; ಬೇಗನೆ ಹೋಗಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನರ್ಪಿಸುವದರಿಂದ ಅವನು ಈಗಲೇ ಇಲ್ಲಿಗೆ ಬಂದನು; ಬೇಗನೆ ಹೋಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಯುವತಿಯರು, “ಹೌದು ದರ್ಶಿಯು ಇಲ್ಲಿದ್ದಾನೆ. ಅವನು ದಾರಿಯಲ್ಲಿ ನಿಮಗಿಂತ ಸ್ವಲ್ಪ ಮುಂದೆ ಹೋಗುತ್ತಿದ್ದಾನೆ. ಈ ಹೊತ್ತು ನಮ್ಮ ಊರಿನವರು ಗುಡ್ಡದ ಮೇಲೆ ಯಜ್ಞವನ್ನು ಅರ್ಪಿಸುವುದರಿಂದ ಅವನು ಇಲ್ಲಿಗೆ ಬಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:12
11 ತಿಳಿವುಗಳ ಹೋಲಿಕೆ  

ಯಾಕೋಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ, ಭೋಜನ ಮಾಡುವುದಕ್ಕೆ ತನ್ನ ಬಂಧುಗಳನ್ನು ಕರೆಕಳುಹಿಸಿದನು. ಅವರು ಭೋಜನ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.


ಆಗ ಸಮುಯೇಲನು, “ನಾನು ಹೋಗುವುದು ಹೇಗೆ? ಸೌಲನು ಅದನ್ನು ಕೇಳಿದರೆ, ನನ್ನನ್ನು ಕೊಂದುಹಾಕುವನು,” ಎಂದನು. ಅದಕ್ಕೆ ಯೆಹೋವ ದೇವರು, “ನೀನು ಒಂದು ಕಡಸನ್ನು ನಿನ್ನ ಸಂಗಡ ತೆಗೆದುಕೊಂಡುಹೋಗಿ, ‘ನಾನು ಯೆಹೋವ ದೇವರಿಗಾಗಿ ಯಜ್ಞಮಾಡುವುದಕ್ಕೆ ಬಂದೆನು,’ ಎಂದು ಹೇಳಿ,


“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.


ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಲ್ಲಿ ಯೆಹೋವ ದೇವರ ಗುಡಾರದ ಮುಂದೆ ಸೇವೆಮಾಡುವದಕ್ಕೆ ದಾವೀದನು ಯಾಜಕನಾದ ಚಾದೋಕನನ್ನೂ ಮತ್ತು ಅವನ ಸಹೋದರರನ್ನು ನೇಮಿಸಿದನು.


ಆದರೆ ಅವನು ರಾಮಕ್ಕೆ ತಿರುಗಿ ಬರುತ್ತಾ ಇದ್ದನು. ಏಕೆಂದರೆ ಅಲ್ಲಿ ಅವನ ಮನೆ ಇತ್ತು, ಅಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಯೆಹೋವ ದೇವರಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.


ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವುದನ್ನು ಕಂಡು, ಶ್ರದ್ಧೆಯಿಂದ ವಿಚಾರಿಸಿ ಅವನು ಎಲ್ಲಿ? ಎಂದು ಕೇಳಿದರೆ, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಏಕೆಂದರೆ ತನ್ನ ಸಮಸ್ತ ಕುಟುಂಬಕ್ಕೋಸ್ಕರ ವರುಷದ ಯಜ್ಞ ಮಾಡುತ್ತಾರೆ,’ ಎಂದು ಹೇಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು