Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:13 - ಕನ್ನಡ ಸಮಕಾಲಿಕ ಅನುವಾದ

13 ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ಗುಡ್ಡದ ಮೇಲೆ ತಿನ್ನಲು ಹೋಗುವರು. ಅವನು ಬರುವವರೆಗೂ ಜನರು ಏನೂ ತಿನ್ನುವುದಿಲ್ಲ. ಅವನು ಬಂದು ಅರ್ಪಣೆಯನ್ನು ಆಶೀರ್ವದಿಸುವನು. ಅನಂತರವೇ ಆಮಂತ್ರಿತರು ಊಟಮಾಡುವರು. ಈಗಲೇ ಹೋಗಿರಿ. ಈ ವೇಳೆಯಲ್ಲಿ ಅವನನ್ನು ಕಂಡುಕೊಳ್ಳುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರು ಬಲಿಭೋಜನಕ್ಕಾಗಿ ಗುಡ್ಡಕ್ಕೆ ಹೋಗುವ ಮೊದಲೇ ನೀವು ಊರೊಳಕ್ಕೆ ಹೋದರೆ ಸಿಕ್ಕುವರು. ಅವರು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಅವರು ಹೋಗಿ ಬಲಿ ಆಹಾರವನ್ನು ಆಶೀರ್ವದಿಸುತ್ತಾರೆ; ಅನಂತರವೇ ಆಮಂತ್ರಿತರು ಊಟಮಾಡುವುದು. ಈಗಲೇ ಹೋಗಿ; ಅವನು ಸಿಕ್ಕುವ ಸಮಯ ಇದೇ,” ಎಂದರು ಆ ಮಹಿಳೆಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿ ಹೋಗುವವರೆಗೆ ಜನರು ಊಟಮಾಡುವದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ; ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ; ಅವನು ಸಿಕ್ಕುವ ಸಮಯ ಇದೇ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಪಟ್ಟಣದೊಳಕ್ಕೆ ಹೋದರೆ ಅವನನ್ನು ಕಾಣಬಹುದು. ನೀವು ಬೇಗನೆ ನೋಡಬೇಕೆಂದಿದ್ದರೆ, ಅವನು ಊಟ ಮಾಡುವುದಕ್ಕಾಗಿ ಆರಾಧನೆಯ ಸ್ಥಳಕ್ಕೆ ಹೋಗುವುದಕ್ಕಿಂತ ಮೊದಲೇ ಅವನನ್ನು ಕಾಣಬೇಕು. ದರ್ಶಿಯು ಯಜ್ಞವನ್ನು ಆಶೀರ್ವದಿಸಬೇಕಾಗಿರುವುದರಿಂದ ಅವನು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಆದ್ದರಿಂದ ನೀವು ಬೇಗನೆ ಹೋದರೆ ಅವನನ್ನು ಕಾಣಬಹುದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:13
12 ತಿಳಿವುಗಳ ಹೋಲಿಕೆ  

ಆಮೇಲೆ ಯೇಸು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಬೇಕಾದಷ್ಟು ಹಂಚಿದರು. ಅದೇ ರೀತಿಯಲ್ಲಿ ಮೀನುಗಳನ್ನು ಅವರಿಗೆ ಹಂಚಿದರು.


ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.


ನಾನು ಕೃತಜ್ಞತೆ ಸಲ್ಲಿಸಿ ಆ ಊಟವನ್ನು ಮಾಡಿದರೆ, ಹಾಗೆ ದೇವರಿಗೆ ಕೃತಜ್ಞತೆ ಸಲ್ಲಿಸಿ ಮಾಡಿದ ಊಟಕ್ಕಾಗಿ ನನ್ನ ಮೇಲೆ ತಪ್ಪುಹೊರಿಸುವುದೇಕೆ?


ಬೇರೆ ದೋಣಿಗಳು ತಿಬೇರಿಯದಿಂದ ಹೊರಟು, ಕರ್ತ ಯೇಸು ಕೃತಜ್ಞತೆ ಸಲ್ಲಿಸಿ ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.


ಯೇಸು ಆ ಇಬ್ಬರು ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡಿರಲು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ, ಮುರಿದು ಅವರಿಗೆ ಕೊಟ್ಟರು.


ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ರೊಟ್ಟಿಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅದರಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚಿಸಿದರು.


ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು ತಮ್ಮ ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ,” ಎಂದರು.


ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು.


ತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು.


ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.


ಅವರು ಪಟ್ಟಣಕ್ಕೆ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ, ಸಮುಯೇಲನು ಗುಡ್ಡದ ಮೇಲಕ್ಕೆ ಏರಿ ಹೋಗುವುದಕ್ಕೆ ಅವರಿಗೆದುರಾಗಿ ಹೊರಟುಬಂದನು.


ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲಾದ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ಒಳಸಂಚನ್ನು ಏನೂ ತಿಳಿಯದೆ ಯಥಾರ್ಥ ಮನಸ್ಸುಳ್ಳವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು