Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:17 - ಕನ್ನಡ ಸಮಕಾಲಿಕ ಅನುವಾದ

17 ಸಮುಯೇಲನು ಸೌಲನನ್ನು ಕಂಡಾಗ ಯೆಹೋವ ದೇವರು, “ಇಗೋ, ನಾನು ನಿನಗೆ ಹೇಳಿದ ಮನುಷ್ಯನು ಇವನೇ. ಇವನೇ ನನ್ನ ಜನರನ್ನು ಆಳುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು” ಎಂದು ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಮುವೇಲನು ಸೌಲನನ್ನು ಕಂಡಾಗ ಸರ್ವೇಶ್ವರ ಅವನಿಗೆ, “ನಾನು ತಿಳಿಸಿದ್ದ ವ್ಯಕ್ತಿ ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು,” ಎಂದು ಸೂಚಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ - ನಾನು ತಿಳಿಸಿದ್ದ ಮನುಷ್ಯನು ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು ಎಂದು ಸೂಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಮುವೇಲನು ಸೌಲನನ್ನು ಕಂಡಾಗ ಯೆಹೋವನು ಅವನಿಗೆ, “ನಾನು ನಿನಗೆ ಹೇಳಿದ ಮನುಷ್ಯ ಇವನೇ. ಇವನು ನನ್ನ ಜನರನ್ನು ಆಳುತ್ತಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:17
10 ತಿಳಿವುಗಳ ಹೋಲಿಕೆ  

ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು ಮತ್ತು ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.


ಅನಂತರ ಜನರು ಒಬ್ಬ ಅರಸನು ತಮಗೆ ಬೇಕೆಂದು ಕೇಳಿಕೊಳ್ಳಲು, ದೇವರು ಬೆನ್ಯಾಮೀನ್ ಗೋತ್ರದ ಕೀಷನ ಮಗ ಸೌಲನನ್ನು ಅವರಿಗೆ ಕೊಟ್ಟರು. ಇವನು ನಲವತ್ತು ವರ್ಷ ಆಳ್ವಿಕೆ ಮಾಡಿದನು.


ಆಗ ನಾನು ಅವರನ್ನು ಗದರಿಸಿ, ಶಪಿಸಿ, ಅವರಲ್ಲಿ ಕೆಲವರನ್ನು ಹೊಡೆದು, ಅವರ ಕೂದಲನ್ನು ಕಿತ್ತು, “ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೂ, ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೂ, ಮದುವೆಮಾಡಿಕೊಡಬೇಡಿರಿ, ಎಂದು ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣಮಾಡಿಸಿದೆನು.


ಸಬ್ಬತ್ ದಿನಕ್ಕೆ ಮುಂಚೆ ಯೆರೂಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗಲಾರಂಭಿಸಿದಾಗ ಬಾಗಿಲುಗಳನ್ನು ಹಾಕುವ ಹಾಗೆಯೂ, ಸಬ್ಬತ್ ದಿನವು ತೀರುವವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಸಬ್ಬತ್ ದಿನದಲ್ಲಿ ಹೊರೆ ಏನಾದರೂ ಒಳಗೆ ತರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಇಟ್ಟೆನು.


ನಾನು ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯತೀರಿಸುವೆನು, ಎಂದು ಹೇಳಿದ್ದೆನು. ಏಕೆಂದರೆ ತನ್ನ ಪುತ್ರರು ದೇವರ ನಿಂದನೆ ಮಾಡಿದಾಗ, ಅವರನ್ನು ಹತೋಟಿಗೆ ತರಲಿಲ್ಲ.


ಸೌಲನು ಊರಿನ ಬಾಗಿಲಲ್ಲಿ ಇರುವ ಸಮುಯೇಲನ ಸಮೀಪಕ್ಕೆ ಬಂದು, ಅವನಿಗೆ, “ದರ್ಶಿಯ ಮನೆಯು ಎಲ್ಲಿ ಇದೆ? ದಯಮಾಡಿ ನೀನು ನನಗೆ ತಿಳಿಸು,” ಎಂದನು.


“ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು, ಯೆಹೋವ ದೇವರ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆ ಬಂದು, ‘ಬೆನ್ಯಾಮೀನಿನ ದೇಶದಲ್ಲಿರುವ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಬಾಧ್ಯದ ಅಧಿಕಾರವೂ ನಿನ್ನದು; ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ,’ ಎಂದು ಬೇಡಿಕೊಂಡು ಹೇಳಿದನು. “ಆಗ ಅದು ಯೆಹೋವ ದೇವರ ವಾಕ್ಯವೆಂದು ನಾನು ತಿಳಿದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು