Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:20 - ಕನ್ನಡ ಸಮಕಾಲಿಕ ಅನುವಾದ

20 ಇಂದಿಗೆ ಮೂರನೆಯ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ. ಏಕೆಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು? ಅದು ನಿನ್ನ ಮೇಲೆಯೇ ಅಲ್ಲವೋ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮೂರು ದಿನಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಇಸ್ರಾಯೇಲರ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು, ನಿನ್ನ ಮತ್ತು ನಿನ್ನ ತಂದೆಯ ಕುಟುಂಬದವರಿಗೂ ಸಲ್ಲುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ; ಅವು ಈಗಾಗಲೇ ಸಿಕ್ಕಿವೆ. ಮತ್ತು ಇಸ್ರಯೇಲರ ಆಶೋತ್ತರವೆಲ್ಲ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗೋಸ್ಕರ ಚಿಂತೆಮಾಡಬೇಡ; ಅವು ಸಿಕ್ಕಿವೆ. ಮತ್ತು ಇಸ್ರಾಯೇಲ್ಯರ ಶ್ರೇಷ್ಠವಸ್ತುಗಳೆಲ್ಲಾ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೋ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಮೂರು ದಿನಗಳ ಹಿಂದೆ ಕಳೆದು ಹೋದ ನಿನ್ನ ಕತ್ತೆಗಳಿಗಾಗಿ ಚಿಂತಿಸಬೇಡ. ಅವುಗಳೆಲ್ಲ ಸಿಕ್ಕಿವೆ. ಈಗ ಇಸ್ರೇಲರಿಗೆಲ್ಲ ನೀನು ಬೇಕಾಗಿರುವೆ. ಅವರಿಗೆ ನೀನು ಮತ್ತು ನಿನ್ನ ತಂದೆಯ ಕುಟುಂಬದ ಜನರೆಲ್ಲ ಬೇಕಾಗಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:20
11 ತಿಳಿವುಗಳ ಹೋಲಿಕೆ  

“ನೀನು ವೃದ್ಧನಾದೆ, ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವುದಿಲ್ಲ. ಈಗ ಎಲ್ಲ ರಾಷ್ಟ್ರಗಳ ಹಾಗೆ ನಮಗೆ ನ್ಯಾಯತೀರಿಸುವುದಕ್ಕೆ ಒಬ್ಬ ಅರಸನನ್ನು ನೇಮಿಸು,” ಎಂದರು.


ಈಗ ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಯೆಹೋವ ದೇವರು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾರೆ.


ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದ್ದರಿಂದ ಅವನು ತನ್ನ ಮಗ ಸೌಲನಿಗೆ, “ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರೆದುಕೊಂಡು, ಕತ್ತೆಗಳನ್ನು ಹುಡುಕಲು ಹೋಗಬೇಕು,” ಎಂದನು.


ಪರಲೋಕದ ಕಾರ್ಯಗಳ ಮೇಲೆಯೇ ನಿಮ್ಮ ಮನಸ್ಸಿಡಿರಿ, ಭೂಸಂಬಂಧವಾದವುಗಳ ಮೇಲೆ ಮನಸ್ಸಿಡಬೇಡಿರಿ.


ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.


ಇದಲ್ಲದೆ ನಾನು ನನ್ನ ದೇವರ ಮನೆಯ ಮೇಲೆ ನನಗೆ ಭಕ್ತಿ ಇರುವುದರಿಂದ, ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು, ನನ್ನ ಸ್ವಂತ ಸ್ವತ್ತಿನಿಂದ ಬಂಗಾರವನ್ನೂ, ಬೆಳ್ಳಿಯನ್ನೂ ನನ್ನ ಪವಿತ್ರ ದೇವರ ಮನೆಗೆ ಕೊಟ್ಟಿದ್ದೇನೆ.


ನೀವು ಯೆಹೋವ ದೇವರ ಮಾತಿಗೆ ವಿಧೇಯರಾಗದಿದ್ದರೆ, ಯೆಹೋವ ದೇವರ ಆಜ್ಞೆಗೆ ವಿರೋಧವಾಗಿ ತಿರುಗಿಬಿದ್ದರೆ, ಯೆಹೋವ ದೇವರ ಹಸ್ತವು ನಿಮ್ಮ ಪಿತೃಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿರುವುದು.


ಆದರೂ ಜನರು ಸಮುಯೇಲನ ಮಾತನ್ನು ಕೇಳಲೊಲ್ಲದೆ, ಅವರು, “ಹಾಗಲ್ಲ, ನಮ್ಮ ಮೇಲೆ ಅರಸನು ಇರಬೇಕು.


ಅವಳು ಸಾಯುವ ವೇಳೆಯಲ್ಲಿ, ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು, “ಭಯಪಡಬೇಡ. ಗಂಡು ಮಗುವನ್ನು ಹೆತ್ತಿದ್ದೀ,” ಎಂದು ಅವಳಿಗೆ ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯವನ್ನೂ ಕೊಡಲಿಲ್ಲ, ಪ್ರತ್ಯುತ್ತರವನ್ನೂ ಕೊಡಲಿಲ್ಲ.


ಸಮುಯೇಲನು ಸೌಲನಿಗೆ ಉತ್ತರವಾಗಿ, “ದರ್ಶಿಯು ನಾನೇ, ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು. ಈ ಹೊತ್ತು ನೀನು ನನ್ನ ಸಂಗಡ ಊಟಮಾಡಬೇಕು, ನಾಳೆ ಹೊತ್ತಾರೆ ನಿನ್ನನ್ನು ಕಳುಹಿಸುವೆನು. ನಿನ್ನ ಹೃದಯದಲ್ಲಿರುವುದನ್ನೆಲ್ಲಾ ನಿನಗೆ ತಿಳಿಯಪಡಿಸುವೆನು.


ಸೌಲನು ತನ್ನ ಚಿಕ್ಕಪ್ಪನಿಗೆ, “ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು,” ಎಂದನು. ಆದರೆ ಅವನು ಸಮುಯೇಲನು ಹೇಳಿದ ರಾಜ್ಯಭಾರದ ಮಾತನ್ನು ಅವನಿಗೆ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು