Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 9:9 - ಕನ್ನಡ ಸಮಕಾಲಿಕ ಅನುವಾದ

9 ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 (ಪೂರ್ವ ಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರ ಕೇಳಬೇಕಾದರೆ “ದೇವ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ” ಎನ್ನುವರು. ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು, ಆ ಕಾಲದಲ್ಲಿ ದೇವದರ್ಶಿಗಳೆಂದು ಕರೆಯುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 (ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 (ಪೂರ್ವಕಾಲದಲ್ಲಿ ಇಸ್ರಾಯೇಲ್ಯರಲ್ಲಿ ಯಾವನಾದರೂ ದೈವೋತ್ತರಕೇಳಬೇಕಾದರೆ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದರ್ಶಿಗಳೆಂದು ಕರೆಯುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 (ಹಿಂದಿನ ಕಾಲದಲ್ಲಿ ಇಸ್ರೇಲರು ಪ್ರವಾದಿಯನ್ನು “ದರ್ಶಿ” ಎಂದು ಕರೆಯುತ್ತಿದ್ದರು. ದೇವರಿಂದ ಏನಾದರೂ ಕೇಳಬೇಕಾಗಿದ್ದರೆ, “ದರ್ಶಿಯ ಬಳಿಗೆ ಹೋಗೋಣ” ಎನ್ನುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 9:9
16 ತಿಳಿವುಗಳ ಹೋಲಿಕೆ  

ಅವರು ನೋಡುವವರಿಗೆ, “ನೋಡಬೇಡಿರಿ,” ಎಂದು ಪ್ರವಾದಿಗಳಿಗೆ, “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ, ನಮಗೆ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ. ನಯವಾದವುಗಳನ್ನೇ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಅನಂತರ ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ: “ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿ ದುಡಿದು ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.


ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯವರೆಗೆ ಅವನ ಸಮಸ್ತ ಆಳಿಕೆಯೂ, ಅವನ ಪರಾಕ್ರಮವೂ, ಅವನ ಮೇಲೆಯೂ, ಇಸ್ರಾಯೇಲಿನ ಮೇಲೆಯೂ, ಬೇರೆ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಸಂಭವಿಸಿದ ಘಟನೆಗಳು,


ಇದಲ್ಲದೆ ದರ್ಶಿಯಾದ ಸಮುಯೇಲನೂ, ಕೀಷನ ಮಗ ಸೌಲನೂ, ನೇರನ ಮಗ ಅಬ್ನೇರನೂ, ಚೆರೂಯಳ ಮಗ ಯೋವಾಬನೂ ಪ್ರತಿಷ್ಠೆ ಮಾಡಿದ್ದೆಲ್ಲವೂ ಮತ್ತು ಯಾರು ಪ್ರತಿಷ್ಠೆ ಮಾಡಿದ್ದರೋ, ಅದೆಲ್ಲವೂ ಶೆಲೋಮೋತನ ಕೈಕೆಳಗೂ, ಅವನ ಸಹೋದರರ ಕೈಕೆಳಗೂ ಇತ್ತು.


“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.


ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,


ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.


ಅವಳ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು, “ನನಗೆ ಏಕೆ ಹೀಗಾಗುತ್ತಿದೆ?” ಎಂದು ಕೇಳಿ, ಯೆಹೋವ ದೇವರ ಬಳಿಗೆ ವಿಚಾರಿಸುವುದಕ್ಕೆ ಹೋದಳು.


ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.


ಅದೇ ಕಾಲದಲ್ಲಿ ದರ್ಶಿಯಾದ ಹನಾನೀಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವ ದೇವರ ಮೇಲೆ ಆತುಕೊಳ್ಳದೆ, ಅರಾಮಿನ ಅರಸನ ಮೇಲೆ ಆತುಕೊಂಡದ್ದರಿಂದ, ಅರಾಮಿನ ಅರಸನ ಸೈನ್ಯವು ನಿಮ್ಮ ಕೈಯಿಂದ ತಪ್ಪಿಸಿಕೊಂಡಿತು.


ಬಾಗಿಲುಗಳಲ್ಲಿ ದ್ವಾರಪಾಲಕರಾಗಿರಲು ಆಯ್ಕೆಯಾದ ಇವರೆಲ್ಲರು 212 ಮಂದಿಯಾಗಿದ್ದರು. ಇವರು ಹೆಸರುಗಳು ಅವರವರ ಗ್ರಾಮಗಳಲ್ಲಿ ಅವರ ವಂಶಾವಳಿಯ ಪ್ರಕಾರ ಲಿಖಿತವಾಗಿದ್ದವು. ಇವರು ನಂಬಿಗಸ್ತರಾದ್ದರಿಂದ ದಾವೀದನೂ, ದರ್ಶಿಯಾದ ಸಮುಯೇಲನೂ ಇವರನ್ನು ಜವಾಬ್ದಾರಿಯ ಸ್ಥಾನಗಳಿಗೆ ನೇಮಿಸಿದರು.


ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.


ಆಗ ಸೌಲನು ಸೇವಕನಿಗೆ, “ನಿನ್ನ ಮಾತು ಒಳ್ಳೆಯದು. ನಾವು ಹೋಗೋಣ ಬಾ,” ಎಂದನು. ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.


ಆಗ ಯೆಹೋವ ದೇವರು ದಾವೀದನ ದರ್ಶಿಯಾದ ಗಾದನಿಗೆ,


ಆಗ ಅವರು ಅವನಿಗೆ, “ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವುದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು,” ಎಂದರು.


ದೇಹವೆಲ್ಲಾ ಕಣ್ಣಾದರೆ ನಾವು ಕೇಳುವುದೆಲ್ಲಿ? ಅಥವಾ ಅದೆಲ್ಲಾ ಕಿವಿಯಾದರೆ, ಮೂಸಿ ನೋಡುವುದೆಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು